Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...