Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...