Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...