Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...