Homeಕರ್ನಾಟಕಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಕಿರಿಯ ಕಲಾವಿದನಿಗೆ ರಂಗಾಯಣ ನಿರ್ದೇಶಕ ಕಾರ್ಯಪ್ಪ ನಿಂದನೆ; ಆಡಿಯೊ ವೈರಲ್‌

ಸಂದರ್ಶನಕ್ಕೆ ಹಾಜರಾಗಿದ್ದ ಕಲಾವಿದನನ್ನು ಹೀಯಾಳಿಸಿ ಹೊರಗೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಕಿರಿಯ ಕಲಾವಿದರೊಬ್ಬರಿಗೆ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ನಿಂದಿಸಿರುವ ಆಡಿಯೊ ವೈರಲ್‌ ಆಗಿದೆ. ಆಕ್ಷೇಪಾರ್ಹ ಪದಗಳನ್ನು ಕಿರಿಯ ರಂಗಕರ್ಮಿಗೆ ನಿರ್ದೇಶಕರು ಬಳಸಿರುವುದು ಆಡಿಯೊದಲ್ಲಿ ದಾಖಲಾಗಿದೆ.

ರಂಗಾಯಣದ ರೆಪರ್ಟರಿ ಕಲಾವಿದರ ಆಯ್ಕೆ ಪ್ರಕ್ರಿಯೆ ಮೊನ್ನೆಯಷ್ಟೇ ಮೈಸೂರು ರಂಗಾಯಣದಲ್ಲಿ ನಡೆದಿತ್ತು. ರಂಗಾಯಣದಲ್ಲಿ ತರಬೇತಿ ಪಡೆದಿರುವ ಅನುರಾಗ್ ಶರ್ಮ ಎನ್ನುವ ಕಿರಿಯ ಕಲಾವಿದ ಅರ್ಜಿ ಹಾಕಿದ್ದರು. ಆದರೆ ಈ ಹಿಂದೆ ಕಾರ್ಯಪ್ಪ ಅವರ ವಿರುದ್ಧ ಅನುರಾಗ್‌ ಮಾತನಾಡಿದ್ದರು ಎಂಬ ಕಾರಣಕ್ಕೆ ಸಂದರ್ಶನ ನಡೆಸದೆ ವಾಪಸ್‌ ಕಳಿಸಲಾಗಿದೆ ಹಾಗೂ ಕೆಟ್ಟ ಪದಗಳನ್ನು ಬಳಸಿ ನಿಂದಿಸಿದರೂ ಎಂದು ಆರೋಪಿಸಲಾಗಿದೆ. ನಂತರ ಅನುರಾಗ್ ಅವರು ರಂಗಾಯಣ ನಿರ್ದೇಶಕರಿಗೆ ಕರೆ ಮಾಡಿ, “ಏಕೆ ನನ್ನ ಸಂದರ್ಶನ ಮಾಡಲಿಲ್ಲ” ಎಂದು ಕೇಳಿದಾಗ ಆಕ್ಷೇಪಾರ್ಹ ಪದಗಳನ್ನು ಕಾರ್ಯಪ್ಪ ಅವರು ಬಳಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈರಲ್‌ ಆಡಿಯೊದಲ್ಲಿ ಏನಿದೆ? 

ಅನುರಾಗ್‌: ನನ್ನನ್ನು ಸಂದರ್ಶನ ಮಾಡದೆ ನಿನ್ನೆ ಹೊರಗೆ ಕಳಿಸಿದ್ದು ಏಕೆ?

ಅಡ್ಡಂಡ ಕಾರ್ಯಪ್ಪ: ನೀನು ಯಾರೋ ಮಾರಾಯ ಫೋನ್‌ ಮಾಡೋದಕ್ಕೆ? ನೀ ಯಾರು ನನ್ನ ಕೇಳೋದಕ್ಕೆ… ಲೋ……. ಇಡೋ ಮಾರಾಯ ಫೋನು.

ಅನುರಾಗ್: ನಾನು ಏಕೆ ಫೋನ್ ಮಾಡಬಾರದು.

ಕಾರ್ಯಪ್ಪ: ನೀನ್ ಯಾರೋ ಫೋನ್ ಮಾಡೋಕೆ? ರಂಗಾಯಣಕ್ಕೆ ಕೆಟ್ಟ ಹೆಸರು ತರೋದಕ್ಕೆ… 

ಅನುರಾಗ್: ನಾನು ಯಾವಾಗ ಕೆಟ್ಟ ಹೆಸರು ತಂದಿದ್ದೀನಿ. ಇರೋ ವಿಷಯ ಹೇಳಿದ್ದೇನಲ್ಲವಾ? 

ಕಾರ್ಯಪ್ಪ: ಇಡೋ ಮಾರಾಯ ಫೋನು. ನೀನೊಬ್ಬ ಲೋ….  ಇದ್ದೀಯ. ಇಡೋ ಫೋನು.

ಅನುರಾಗ್: ರಂಗಾಯಣ ನಿರ್ದೇಶಕರಾಗಿ ನೀವು ಈ ರೀತಿ ಮಾತನಾಡುವುದು ಸರಿಯೇ? 

ಕಾರ್ಯಪ್ಪ: ನೀನೊಬ್ಬ ಕಡಚಾ ಫೇಲೋ. ನೀನೊಬ್ಬ ಆರ್ಟಿಸ್ಟಾ?

ಅನುರಾಗ್‌: ನಿಮ್ಮ ಕುರ್ಚಿಗಾದರೂ ಮರ್ಯಾದೆ ಕೊಡೋದು ಬೇಡವಾ?

ಕಾರ್ಯಪ್ಪ: ರಂಗಾಯಣದ ಋಣಪಾತಕ ನೀನು. ಫೋನ್ ಮಾಡಲಿಕ್ಕೆ ನಿನಗೆಷ್ಟು ಸೊಕ್ಕು ಇದೆ. 

ಅನುರಾಗ್‌: ಇದಕ್ಕೆ ಉತ್ತರ ಕೊಡಿ ಸಾಕು, ಇಂಟರ್‌ವ್ಯೂಗೆ ಬಂದ ಕಲಾವಿದನನ್ನು….

ಕಾರ್ಯಪ್ಪ: ನೀನ್ಯಾವನೋ ಕೇಳೋಕೆ. ಸರಿಯಾಗಿ ಅಪ್ಲಿಕೇಷನ್‌ ಕೂಡ ಹಾಕದೆ, ಚೇಷ್ಟೇಗಾಗಿ ಬೇಕಂತಲೇ ಅಪ್ಲಿಕೇಷನ್ ಹಾಕಿದವನು ನೀನು. 

ಅನುರಾಗ್‌: ಎಷ್ಟೋ ಜನ ಡಿಪ್ಲೊಮಾ ಕೂಡ ಮಾಡದವರು ರಂಗಾಯಣಕ್ಕೆ ಅರ್ಜಿ ಹಾಕಿದ್ದಾರೆ. 

ಕಾರ್ಯಪ್ಪ: ನೀನು ಡಿಪ್ಲೊಮಾ ಮಾಡಿದವನು. ನಿನ್ನನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನಾಗಿ ಗೊತ್ತಿತ್ತು. ಆದರೆ ನೀನು ಹಾಕಿದ ಉದ್ದೇಶವೇ… (ಮಾತು ಅಸ್ಪಷ್ಟವಾಗಿದೆ).

ಅನುರಾಗ್: ಸುಮ್ಮನೇ ಕೂಗಾಡಬೇಡಿ ಸರ್‌. ಬೇರೆಯವರ ಮಾತನ್ನೂ ಕೇಳಿಸಿಕೊಳ್ಳಿ.

ಕಾರ್ಯಪ್ಪ: ನಾಯಿಗಳ ಜೊತೆ ನಾನು ಮಾತನಾಡುವುದಿಲ್ಲ.

– ಹೀಗೆ ಸಂಭಾಷಣೆ ಇರುವ ಆಡಿಯೊ ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಹರಿದಾಡಿದೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕಿರಿಯ ಕಲಾವಿದ ಅನುರಾಗ್‌ ಶರ್ಮಾ ಅವರು, “ನಾನೊಬ್ಬ ಕಲಾವಿದನಾಗಿ ರಂಗಾಯಣ ಕೆಲವು ನಾಟಕಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಹೊಸ ಕಲಾವಿದ ಅಲ್ಲ. ‘ಶ್ರೀ ರಾಮಾಯಣ ದರ್ಶನಂ’ ನಾಟಕದಲ್ಲಿ ರಾವಣನ ಪಾತ್ರ ಮಾಡಿದ್ದೆ. ‘ಪರ್ವ’ದಲ್ಲಿ ಕರ್ಣನ ಪಾತ್ರ ಮಾಡಿದ್ದೆ. ಆದರೆ ಕೆಲವು ದಿನಗಳಿಂದ ರಂಗಾಯಣ ನಿರ್ದೇಶಕರು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಸಿದ್ಧಾಂತನ್ನು ಎಲ್ಲ ಕಡೆ ತುರುಕುತ್ತಾ ಹೋಗಿದ್ದರಿಂದ ಇರುಸುಮುರುಸಾಗಿ ಕೆಲವು ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡಿದ್ದೆ. ಈ ವೈಯಕ್ತಿಕ ವೈಷಮ್ಯ ಇಟ್ಟುಕೊಂಡು ಹೀಗೆ ವರ್ತಿಸಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

“ಸಂದರ್ಶನದ ವೇಳೆ- ನೀನು ಕರ್ಣನ ಪಾತ್ರ ಮಾಡಿದವನು. ಆದರೆ ನೀನು ಶಕುನಿ. ನಿನಗೆ ರಂಗಾಯಣಕ್ಕೆ ಅರ್ಜಿ ಹಾಕುವ ಯೋಗ್ಯತೆ ಇಲ್ಲ. ನಿನ್ನ ಸಂದರ್ಶನ ಮಾಡುವುದಿಲ್ಲ. ಹೊರಗೆ ಹೋಗು- ಎಂದು ಬಲವಂತವಾಗಿ ಹೊರದಬ್ಬಿದರು. ಆ ನಂತರದಲ್ಲಿ ಅವರಿಗೆ ಕರೆ ಮಾಡಿದ್ದೆ. ‘ಹೀಗ್ಯಾಕೆ ಮಾಡಿದಿರಿ, ಕನಿಷ್ಟಪಕ್ಷ ಸಂದರ್ಶನವಾದರೂ ಮಾಡಬಹುದಿತ್ತಲ್ಲ’ ಎಂದು ಕೇಳಿದಾಗ ಹೀಗೆ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಪೊಲೀಸರಿಗೆ ದೂರು ನೀಡಿದ್ದೇನೆ: ಅಡ್ಡಂಡ ಕಾರ್ಯಪ್ಪ

ವೈರಲ್ ಆಡಿಯೊಕ್ಕೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ರಂಗಾಯಣ ನಿರ್ದೇಶಕರಾದ ಅಡ್ಡಂಡ ಸಿ.ಕಾರ್ಯಪ್ಪ ಅವರು, “ಸಂದರ್ಶನ ಮುಗಿದ ಮೇಲೆ ಸುಮಾರು ಐವತ್ತು ಭಾರಿ ಕರೆ ಮಾಡಿ ನನಗೆ ಅನುರಾಗ್ ತೊಂದರೆ ಕೊಟ್ಟಿದ್ದಾನೆ. ಆನಂತರದಲ್ಲಿ ನಾನು ಆತನೊಂದಿಗೆ ಮಾತನಾಡಿದ್ದೇನೆ. ಪೊಲೀಸರಿಗೆ ದೂರು ಕೂಡ ನೀಡಿದ್ದೇನೆ” ಎಂದರು.

ಸಂದರ್ಶನ ಮಾಡದೆ ಕಳುಹಿಸಿದರು ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಕಳೆದ ಒಂದು ವರ್ಷದಿಂದ ರಂಗಾಯಣದ ವಿರುದ್ಧ, ನಿರ್ದೇಶಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ರಂಗಾಯಣದ ಚರಿಷ್ಮಾವನ್ನು ಹಾಳು ಮಾಡುತ್ತಾ ಬಂದಿದ್ದಾನೆ. ರಂಗಾಯಣದ ಇಬ್ಬರು ಹಿರಿಯ ಕಲಾವಿದರು, ರಂಗ ಸಮಾಜದ ಇಬ್ಬರು ಸದಸ್ಯರು ಒಳಗೊಂಡು ಸಂದರ್ಶನ ಸಮಿತಿ ಮಾಡಿದ ತೀರ್ಮಾನವಿದು” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...