Homeಕರ್ನಾಟಕಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

- Advertisement -
- Advertisement -

ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಈಗ ಮೈಸೂರು ಆಳಿದ ‘ಟಿಪ್ಪು ಸುಲ್ತಾನ್‌’ ಕುರಿತು ನಾಟಕ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಸುಲ್ತಾನ್ ಕುರಿತು ಟೀಕಾಪ್ರಹಾರ ನಡೆಸಿದ್ದಾರೆ.

ಸುಳ್ಳುಗಳಿಂದಲೇ ಟೀಕೆಗೆ ಒಳಗಾಗಿರುವ ವ್ಯಕ್ತಿಯನ್ನು ಬಹುರೂಪಿ ನಾಟಕೋತ್ಸವಕ್ಕೆ ಕರೆಸಿ ವಿವಾದ ಸೃಷ್ಟಿಸಿದ್ದರಿಂದ ಹಿಡಿದು, ಕಿರಿಯ ಕಲಾವಿದರ ಮೇಲೆ ಟೀಕಾಪ್ರಹಾರವನ್ನು ನಡೆಸಿದವರೆಗೆ ರಂಗಾಯಣವನ್ನು ಕೋಮು ಕೇಂದ್ರಿತ ಮಾಡಿದರೆಂಬ ಟೀಕೆಗೆ ಗುರಿಯಾಗಿರುವ ಕಾರ್ಯಪ್ಪ ಈಗ ಮತ್ತೊಮ್ಮೆ ವಿವಾದದ ಕಡೆಗೆಯೇ ಗಮನ ಹರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಪ್ಪ ಅವರೇ ಬರೆದಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ವನರಂಗದಲ್ಲಿ ಡಾ.ಎಸ್‌.ಎಲ್‌.ಭೈರಪ್ಪ ಅವರು ನ.13ರಂದು ಬಿಡುಗಡೆ ಮಾಡಲಿದ್ದಾರೆ. ನ.20ರಿಂದ ಭೂಮಿಗೀತದಲ್ಲಿ ರಂಗಪ್ರಸ್ತುತಿ ನಡೆಯಲಿದೆ.

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಆರ್‌ಎಸ್‌ಎಸ್ ಮುಖಂಡ ವಾದಿರಾಜ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, ಭಿತ್ತಿಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ್ದಾರೆ. “ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಟಿಪ್ಪು ಕುರಿತು ಬಚ್ಚಿಡಲಾದ ಅನೇಕ ಸತ್ಯಗಳನ್ನು ಹೊರಚೆಲ್ಲಲು 15 ದೃಶ್ಯಗಳ ನಾಟಕವನ್ನು ರಚಿಸಿ, ಪ್ರಯೋಗಕ್ಕೆ ಸಿದ್ಧಪಡಿಸಲಾಗಿದೆ. ರಂಗ ವಿನ್ಯಾಸ ಶಶಿಧರ ಉಡುಪ, ವಸ್ತ್ರಪರಿಕರ ವಿನ್ಯಾಸಕಾರ ಪ್ರಮೋದ್ ಶಿಗ್ಗಾಂವ್ ಮಾಡಿದ್ದಾರೆ. ಸುಬ್ರಹ್ಮಣ್ಯ ಮತ್ತು ಧನಂಜಯ ಅವರು ಈ ನಾಟಕಕ್ಕೆ ಸಂಗೀತ ಸಂಯೋಜಿಸಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ ಮಾಡಿದ್ದಾರೆ. ಎಸ್.ರಾಮನಾಥ್ ಕೆಲವು ಹಾಡುಗಳನ್ನು ಬರೆದಿದ್ದಾರೆ. ಮೂರು ಗಂಟೆಗಳ ಕಾಲ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ” ಎಂದಿದ್ದಾರೆ.

ರಂಗಾಯಣ ರೆಪರ್ಟರಿಯ 15 ಕಲಾವಿದರೊಂದಿಗೆ 10 ಅತಿಥಿ ಕಲಾವಿದರು ಈ ನಾಟಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂವತ್ತು ಕಲಾವಿದರ ತಂಡ ಈ ನಾಟಕಕ್ಕೆ ಕೆಲಸ ಮಾಡಿದೆ. ನಾಟಕದ ಪ್ರಥಮ ಪ್ರದರ್ಶನ ನ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ. ನಂತರ ನ.21, 24, 26, 27, 30 ಹಾಗೂ ಡಿಸೆಂಬರ್‌ 4ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದ್ದಾರೆ.

“ಈ ನಾಟಕವು ಸತ್ಯ ಚರಿತ್ರೆಯ ಅನಾವರಣ. ಟಿಪ್ಪು ಕುರಿತು ಅತಿರಂಜಕ ಸುಳ್ಳು ಚರಿತ್ರೆಯೇ ನಿರ್ಮಾಣವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ನಡೆದಿರುವ ಮುಸ್ಲಿಂ ದೊರೆಗಳ ಆಕ್ರಮಣಕಾರಿ ಕೃತ್ಯಗಳನ್ನು ಅತ್ಯಂತ ಜಾಣತನದಿಂದ ಮುಚ್ಚಿಟ್ಟು ಬರೆದಿರುವ ಇತಿಹಾಸಕಾರರ ಚಿರಿತ್ರೆಯನ್ನೇ ಪಠ್ಯ ಪುಸ್ತಕವನ್ನಾಗಿಸಿ ಅದನ್ನೇ ಓದಿಸಿಕೊಂಡು ಬರಲಾಗಿದೆ. ಈ ಸುಳ್ಳಿನಲ್ಲಿ ಟಿಪ್ಪು ಸುಲ್ತಾನ್ ಸೇರುತ್ತಾನೆ” ಎಂದು ಕಾರ್ಯಪ್ಪ ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್‌ ಕುರಿತು ನಿಲ್ಲದ ಅಪಪ್ರಚಾರ

ಮೈಸೂರು ಆಳಿದ ಟಿಪ್ಪು ಸುಲ್ತಾನ್‌ರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಹಲವು ವರ್ಷಗಳಿಂದ ನಡೆಯುತ್ತಲೇ ಇವೆ. ಆದರೆ ಚಿಂತಕರು, ಇತಿಹಾಸಕಾರರು ಬೇರೆಯೇ ಸಂಗತಿಗಳನ್ನು ಹೇಳುತ್ತಾರೆ. ‘ನಾನುಗೌರಿ.ಕಾಂ’ ಈ ಕುರಿತು ಪದೇ ಪದೇ ವರದಿಗಳನ್ನು ಮಾಡಿದೆ.

ಬ್ರಾಹ್ಮಣರಿಗೆ ಟಿಪ್ಪು ಭೂದಾನ ಮಾಡಿದ್ದಿದೆ. ತುಳುನಾಡಿನ ದೇವಾಲಯಗಳಿಗೆ, ಕೇರಳದ ಮಲಬಾರ್ ಪ್ರದೇಶಕ್ಕೆ ಟಿಪ್ಪು ಸಾಕಷ್ಟು ಕೊಡುಗೆಗಳನ್ನು ಟಿಪ್ಪು ನೀಡಿದ್ದಾರೆ. ಟಿಪ್ಪು, ಅರ್ಹತೆ ಮತ್ತು ಸಾಮರ್ಥ್ಯದ ಆಧಾರದಲ್ಲಿ ಎಲ್ಲ ಧರ್ಮೀಯರಿಗೂ ತನ್ನ ಆಸ್ಥಾನದಲ್ಲಿ ಉನ್ನತ ಹುದ್ದೆಗಳನ್ನು ನೀಡಿದ್ದರು ಎಂಬುದು ಇತಿಹಾಸ ಪುಟಗಳಿಂದ ತಿಳಿದುಬರುತ್ತದೆ.

ಇವುಗಳನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಿವಾದಗಳ ಕುರಿತ ಸುದ್ದಿಗಳನ್ನು ಓದಲು ‘ಇಲ್ಲಿ ಕ್ಲಿಕ್’ ಮಾಡಿರಿ

“ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ” ಎನ್ನುತ್ತಾರೆ ‘ಟಿಪ್ಪು ಸುಲ್ತಾನ್‌’ ಕುರಿತು ಪುಸ್ತಕವನ್ನು ಬರೆದಿರುವ ‘ಇಸ್ಮತ್ ಫಜೀರ್‌’.

ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಂಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.

ಮಂಗಳೂರು ಭಾಗದ ಕ್ರೈಸ್ತರು ಬ್ರಿಟಿಷರೊಂದಿಗೆ ಕೈಜೋಡಿಸಿದ್ದನ್ನು ಟಿಪ್ಪು ಸಹಿಸಲಿಲ್ಲ. ಮುಸ್ಲಿಮರು ರಾಜ್ಯದ್ರೋಹ ಮಾಡಿದಾಗಲೂ ಟಿಪ್ಪು ವಿನಾಯಿತಿ ನೀಡಲಿಲ್ಲ. ಮಲಬಾರಿನ ನಾಯಕರುಗಳು, ಮಂಗಳೂರಿನ ಕ್ರೈಸ್ತರು, ಕೊಡವರು ಮುಂತಾದವರ ಜೊತೆ ಕ್ರೂರವಾಗಿ ವರ್ತಿಸಿದ್ದಕ್ಕೆ ರಾಜ್ಯದ್ರೋಹವೇ ಕಾರಣವಾಗಿತ್ತು. ಅದು ಅಂದಿನ ಆಡಳಿತದ ಪರಿಯಾಗಿತ್ತು ಎಂಬುದನ್ನು ಲೇಖಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಕೊಡಗಿನಲ್ಲಿ 70,000 ಹಿಂದೂಗಳನ್ನು ಟಿಪ್ಪು ಮತಾಂತರ ಮಾಡಿದ ಎನ್ನುತ್ತಾರೆ. ಆದರೆ ಟಿಪ್ಪು ನಿಧನದ 37 ವರ್ಷಗಳ ನಂತರದ ಜನಗಣತಿಯಲ್ಲಿ ಕೊಡಗಿನ ಜನಸಂಖ್ಯೆ 65,437 ಇರುವುದು ವಾಸ್ತವ. ಈ ಅಂಕಿಸಂಖ್ಯೆಗಳೇ ಈ ಮತಾಂತರದ ಸುಳ್ಳಿನ ಕಥೆಗೆ ಉತ್ತರ ಹೇಳುತ್ತವೆ. ಕ್ರೈಸ್ತರನ್ನು ಮತಾಂತರ ಮಾಡಲಾಯಿತು, 7,900 ದೇವಾಲಯಗಳನ್ನು ಧ್ವಂಸ ಮಾಡಲಾಯಿತು ಎಂಬುದೂ ಇಂತಹದ್ದೇ ಕಟ್ಟುಕತೆಗಳು. ಬಲವಂತದ ಮತಾಂತರ ಎಂಬುದು ಆಧಾರರಹಿತವಾಗಿದೆ ಎಂದು ಇತಿಹಾಸಕಾರರು ಪದೇಪದೇ ಹೇಳುತ್ತಿದ್ದಾರೆ.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು ಎಂದು ಚರಿತ್ರಾಕಾರರು ಉಲ್ಲೇಖಿಸುತ್ತಾರೆ.

(ಟಿಪ್ಪು ಕುರಿತ ವಿಶೇಷ ಬರಹಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಹೆಸರಿಗೆ ಮಸಿ ಬಳಿಯಲು ಮನುವಾದಿಗಳು ಎಷ್ಟೇ ಪ್ರಯತ್ನ ಮಾಡಿದರೂ, ಸಪಲರಾಗುವುದಿಲ್ಲ. ಏಕೆಂದರೆ ಟಿಪ್ಪುವಿನ ಸಾದನೆ ಅಜರಾಮರ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...