Homeಕರ್ನಾಟಕಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

- Advertisement -
- Advertisement -

ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಈಗ ಮೈಸೂರು ಆಳಿದ ‘ಟಿಪ್ಪು ಸುಲ್ತಾನ್‌’ ಕುರಿತು ನಾಟಕ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಸುಲ್ತಾನ್ ಕುರಿತು ಟೀಕಾಪ್ರಹಾರ ನಡೆಸಿದ್ದಾರೆ.

ಸುಳ್ಳುಗಳಿಂದಲೇ ಟೀಕೆಗೆ ಒಳಗಾಗಿರುವ ವ್ಯಕ್ತಿಯನ್ನು ಬಹುರೂಪಿ ನಾಟಕೋತ್ಸವಕ್ಕೆ ಕರೆಸಿ ವಿವಾದ ಸೃಷ್ಟಿಸಿದ್ದರಿಂದ ಹಿಡಿದು, ಕಿರಿಯ ಕಲಾವಿದರ ಮೇಲೆ ಟೀಕಾಪ್ರಹಾರವನ್ನು ನಡೆಸಿದವರೆಗೆ ರಂಗಾಯಣವನ್ನು ಕೋಮು ಕೇಂದ್ರಿತ ಮಾಡಿದರೆಂಬ ಟೀಕೆಗೆ ಗುರಿಯಾಗಿರುವ ಕಾರ್ಯಪ್ಪ ಈಗ ಮತ್ತೊಮ್ಮೆ ವಿವಾದದ ಕಡೆಗೆಯೇ ಗಮನ ಹರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಪ್ಪ ಅವರೇ ಬರೆದಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ವನರಂಗದಲ್ಲಿ ಡಾ.ಎಸ್‌.ಎಲ್‌.ಭೈರಪ್ಪ ಅವರು ನ.13ರಂದು ಬಿಡುಗಡೆ ಮಾಡಲಿದ್ದಾರೆ. ನ.20ರಿಂದ ಭೂಮಿಗೀತದಲ್ಲಿ ರಂಗಪ್ರಸ್ತುತಿ ನಡೆಯಲಿದೆ.

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಆರ್‌ಎಸ್‌ಎಸ್ ಮುಖಂಡ ವಾದಿರಾಜ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, ಭಿತ್ತಿಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ್ದಾರೆ. “ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಟಿಪ್ಪು ಕುರಿತು ಬಚ್ಚಿಡಲಾದ ಅನೇಕ ಸತ್ಯಗಳನ್ನು ಹೊರಚೆಲ್ಲಲು 15 ದೃಶ್ಯಗಳ ನಾಟಕವನ್ನು ರಚಿಸಿ, ಪ್ರಯೋಗಕ್ಕೆ ಸಿದ್ಧಪಡಿಸಲಾಗಿದೆ. ರಂಗ ವಿನ್ಯಾಸ ಶಶಿಧರ ಉಡುಪ, ವಸ್ತ್ರಪರಿಕರ ವಿನ್ಯಾಸಕಾರ ಪ್ರಮೋದ್ ಶಿಗ್ಗಾಂವ್ ಮಾಡಿದ್ದಾರೆ. ಸುಬ್ರಹ್ಮಣ್ಯ ಮತ್ತು ಧನಂಜಯ ಅವರು ಈ ನಾಟಕಕ್ಕೆ ಸಂಗೀತ ಸಂಯೋಜಿಸಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ ಮಾಡಿದ್ದಾರೆ. ಎಸ್.ರಾಮನಾಥ್ ಕೆಲವು ಹಾಡುಗಳನ್ನು ಬರೆದಿದ್ದಾರೆ. ಮೂರು ಗಂಟೆಗಳ ಕಾಲ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ” ಎಂದಿದ್ದಾರೆ.

ರಂಗಾಯಣ ರೆಪರ್ಟರಿಯ 15 ಕಲಾವಿದರೊಂದಿಗೆ 10 ಅತಿಥಿ ಕಲಾವಿದರು ಈ ನಾಟಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂವತ್ತು ಕಲಾವಿದರ ತಂಡ ಈ ನಾಟಕಕ್ಕೆ ಕೆಲಸ ಮಾಡಿದೆ. ನಾಟಕದ ಪ್ರಥಮ ಪ್ರದರ್ಶನ ನ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ. ನಂತರ ನ.21, 24, 26, 27, 30 ಹಾಗೂ ಡಿಸೆಂಬರ್‌ 4ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದ್ದಾರೆ.

“ಈ ನಾಟಕವು ಸತ್ಯ ಚರಿತ್ರೆಯ ಅನಾವರಣ. ಟಿಪ್ಪು ಕುರಿತು ಅತಿರಂಜಕ ಸುಳ್ಳು ಚರಿತ್ರೆಯೇ ನಿರ್ಮಾಣವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ನಡೆದಿರುವ ಮುಸ್ಲಿಂ ದೊರೆಗಳ ಆಕ್ರಮಣಕಾರಿ ಕೃತ್ಯಗಳನ್ನು ಅತ್ಯಂತ ಜಾಣತನದಿಂದ ಮುಚ್ಚಿಟ್ಟು ಬರೆದಿರುವ ಇತಿಹಾಸಕಾರರ ಚಿರಿತ್ರೆಯನ್ನೇ ಪಠ್ಯ ಪುಸ್ತಕವನ್ನಾಗಿಸಿ ಅದನ್ನೇ ಓದಿಸಿಕೊಂಡು ಬರಲಾಗಿದೆ. ಈ ಸುಳ್ಳಿನಲ್ಲಿ ಟಿಪ್ಪು ಸುಲ್ತಾನ್ ಸೇರುತ್ತಾನೆ” ಎಂದು ಕಾರ್ಯಪ್ಪ ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್‌ ಕುರಿತು ನಿಲ್ಲದ ಅಪಪ್ರಚಾರ

ಮೈಸೂರು ಆಳಿದ ಟಿಪ್ಪು ಸುಲ್ತಾನ್‌ರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಹಲವು ವರ್ಷಗಳಿಂದ ನಡೆಯುತ್ತಲೇ ಇವೆ. ಆದರೆ ಚಿಂತಕರು, ಇತಿಹಾಸಕಾರರು ಬೇರೆಯೇ ಸಂಗತಿಗಳನ್ನು ಹೇಳುತ್ತಾರೆ. ‘ನಾನುಗೌರಿ.ಕಾಂ’ ಈ ಕುರಿತು ಪದೇ ಪದೇ ವರದಿಗಳನ್ನು ಮಾಡಿದೆ.

ಬ್ರಾಹ್ಮಣರಿಗೆ ಟಿಪ್ಪು ಭೂದಾನ ಮಾಡಿದ್ದಿದೆ. ತುಳುನಾಡಿನ ದೇವಾಲಯಗಳಿಗೆ, ಕೇರಳದ ಮಲಬಾರ್ ಪ್ರದೇಶಕ್ಕೆ ಟಿಪ್ಪು ಸಾಕಷ್ಟು ಕೊಡುಗೆಗಳನ್ನು ಟಿಪ್ಪು ನೀಡಿದ್ದಾರೆ. ಟಿಪ್ಪು, ಅರ್ಹತೆ ಮತ್ತು ಸಾಮರ್ಥ್ಯದ ಆಧಾರದಲ್ಲಿ ಎಲ್ಲ ಧರ್ಮೀಯರಿಗೂ ತನ್ನ ಆಸ್ಥಾನದಲ್ಲಿ ಉನ್ನತ ಹುದ್ದೆಗಳನ್ನು ನೀಡಿದ್ದರು ಎಂಬುದು ಇತಿಹಾಸ ಪುಟಗಳಿಂದ ತಿಳಿದುಬರುತ್ತದೆ.

ಇವುಗಳನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಿವಾದಗಳ ಕುರಿತ ಸುದ್ದಿಗಳನ್ನು ಓದಲು ‘ಇಲ್ಲಿ ಕ್ಲಿಕ್’ ಮಾಡಿರಿ

“ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ” ಎನ್ನುತ್ತಾರೆ ‘ಟಿಪ್ಪು ಸುಲ್ತಾನ್‌’ ಕುರಿತು ಪುಸ್ತಕವನ್ನು ಬರೆದಿರುವ ‘ಇಸ್ಮತ್ ಫಜೀರ್‌’.

ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಂಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.

ಮಂಗಳೂರು ಭಾಗದ ಕ್ರೈಸ್ತರು ಬ್ರಿಟಿಷರೊಂದಿಗೆ ಕೈಜೋಡಿಸಿದ್ದನ್ನು ಟಿಪ್ಪು ಸಹಿಸಲಿಲ್ಲ. ಮುಸ್ಲಿಮರು ರಾಜ್ಯದ್ರೋಹ ಮಾಡಿದಾಗಲೂ ಟಿಪ್ಪು ವಿನಾಯಿತಿ ನೀಡಲಿಲ್ಲ. ಮಲಬಾರಿನ ನಾಯಕರುಗಳು, ಮಂಗಳೂರಿನ ಕ್ರೈಸ್ತರು, ಕೊಡವರು ಮುಂತಾದವರ ಜೊತೆ ಕ್ರೂರವಾಗಿ ವರ್ತಿಸಿದ್ದಕ್ಕೆ ರಾಜ್ಯದ್ರೋಹವೇ ಕಾರಣವಾಗಿತ್ತು. ಅದು ಅಂದಿನ ಆಡಳಿತದ ಪರಿಯಾಗಿತ್ತು ಎಂಬುದನ್ನು ಲೇಖಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಕೊಡಗಿನಲ್ಲಿ 70,000 ಹಿಂದೂಗಳನ್ನು ಟಿಪ್ಪು ಮತಾಂತರ ಮಾಡಿದ ಎನ್ನುತ್ತಾರೆ. ಆದರೆ ಟಿಪ್ಪು ನಿಧನದ 37 ವರ್ಷಗಳ ನಂತರದ ಜನಗಣತಿಯಲ್ಲಿ ಕೊಡಗಿನ ಜನಸಂಖ್ಯೆ 65,437 ಇರುವುದು ವಾಸ್ತವ. ಈ ಅಂಕಿಸಂಖ್ಯೆಗಳೇ ಈ ಮತಾಂತರದ ಸುಳ್ಳಿನ ಕಥೆಗೆ ಉತ್ತರ ಹೇಳುತ್ತವೆ. ಕ್ರೈಸ್ತರನ್ನು ಮತಾಂತರ ಮಾಡಲಾಯಿತು, 7,900 ದೇವಾಲಯಗಳನ್ನು ಧ್ವಂಸ ಮಾಡಲಾಯಿತು ಎಂಬುದೂ ಇಂತಹದ್ದೇ ಕಟ್ಟುಕತೆಗಳು. ಬಲವಂತದ ಮತಾಂತರ ಎಂಬುದು ಆಧಾರರಹಿತವಾಗಿದೆ ಎಂದು ಇತಿಹಾಸಕಾರರು ಪದೇಪದೇ ಹೇಳುತ್ತಿದ್ದಾರೆ.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು ಎಂದು ಚರಿತ್ರಾಕಾರರು ಉಲ್ಲೇಖಿಸುತ್ತಾರೆ.

(ಟಿಪ್ಪು ಕುರಿತ ವಿಶೇಷ ಬರಹಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಹೆಸರಿಗೆ ಮಸಿ ಬಳಿಯಲು ಮನುವಾದಿಗಳು ಎಷ್ಟೇ ಪ್ರಯತ್ನ ಮಾಡಿದರೂ, ಸಪಲರಾಗುವುದಿಲ್ಲ. ಏಕೆಂದರೆ ಟಿಪ್ಪುವಿನ ಸಾದನೆ ಅಜರಾಮರ.

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...