Homeಕರ್ನಾಟಕಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

- Advertisement -
- Advertisement -

ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಈಗ ಮೈಸೂರು ಆಳಿದ ‘ಟಿಪ್ಪು ಸುಲ್ತಾನ್‌’ ಕುರಿತು ನಾಟಕ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಸುಲ್ತಾನ್ ಕುರಿತು ಟೀಕಾಪ್ರಹಾರ ನಡೆಸಿದ್ದಾರೆ.

ಸುಳ್ಳುಗಳಿಂದಲೇ ಟೀಕೆಗೆ ಒಳಗಾಗಿರುವ ವ್ಯಕ್ತಿಯನ್ನು ಬಹುರೂಪಿ ನಾಟಕೋತ್ಸವಕ್ಕೆ ಕರೆಸಿ ವಿವಾದ ಸೃಷ್ಟಿಸಿದ್ದರಿಂದ ಹಿಡಿದು, ಕಿರಿಯ ಕಲಾವಿದರ ಮೇಲೆ ಟೀಕಾಪ್ರಹಾರವನ್ನು ನಡೆಸಿದವರೆಗೆ ರಂಗಾಯಣವನ್ನು ಕೋಮು ಕೇಂದ್ರಿತ ಮಾಡಿದರೆಂಬ ಟೀಕೆಗೆ ಗುರಿಯಾಗಿರುವ ಕಾರ್ಯಪ್ಪ ಈಗ ಮತ್ತೊಮ್ಮೆ ವಿವಾದದ ಕಡೆಗೆಯೇ ಗಮನ ಹರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಪ್ಪ ಅವರೇ ಬರೆದಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ವನರಂಗದಲ್ಲಿ ಡಾ.ಎಸ್‌.ಎಲ್‌.ಭೈರಪ್ಪ ಅವರು ನ.13ರಂದು ಬಿಡುಗಡೆ ಮಾಡಲಿದ್ದಾರೆ. ನ.20ರಿಂದ ಭೂಮಿಗೀತದಲ್ಲಿ ರಂಗಪ್ರಸ್ತುತಿ ನಡೆಯಲಿದೆ.

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಆರ್‌ಎಸ್‌ಎಸ್ ಮುಖಂಡ ವಾದಿರಾಜ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, ಭಿತ್ತಿಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ್ದಾರೆ. “ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಟಿಪ್ಪು ಕುರಿತು ಬಚ್ಚಿಡಲಾದ ಅನೇಕ ಸತ್ಯಗಳನ್ನು ಹೊರಚೆಲ್ಲಲು 15 ದೃಶ್ಯಗಳ ನಾಟಕವನ್ನು ರಚಿಸಿ, ಪ್ರಯೋಗಕ್ಕೆ ಸಿದ್ಧಪಡಿಸಲಾಗಿದೆ. ರಂಗ ವಿನ್ಯಾಸ ಶಶಿಧರ ಉಡುಪ, ವಸ್ತ್ರಪರಿಕರ ವಿನ್ಯಾಸಕಾರ ಪ್ರಮೋದ್ ಶಿಗ್ಗಾಂವ್ ಮಾಡಿದ್ದಾರೆ. ಸುಬ್ರಹ್ಮಣ್ಯ ಮತ್ತು ಧನಂಜಯ ಅವರು ಈ ನಾಟಕಕ್ಕೆ ಸಂಗೀತ ಸಂಯೋಜಿಸಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ ಮಾಡಿದ್ದಾರೆ. ಎಸ್.ರಾಮನಾಥ್ ಕೆಲವು ಹಾಡುಗಳನ್ನು ಬರೆದಿದ್ದಾರೆ. ಮೂರು ಗಂಟೆಗಳ ಕಾಲ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ” ಎಂದಿದ್ದಾರೆ.

ರಂಗಾಯಣ ರೆಪರ್ಟರಿಯ 15 ಕಲಾವಿದರೊಂದಿಗೆ 10 ಅತಿಥಿ ಕಲಾವಿದರು ಈ ನಾಟಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂವತ್ತು ಕಲಾವಿದರ ತಂಡ ಈ ನಾಟಕಕ್ಕೆ ಕೆಲಸ ಮಾಡಿದೆ. ನಾಟಕದ ಪ್ರಥಮ ಪ್ರದರ್ಶನ ನ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ. ನಂತರ ನ.21, 24, 26, 27, 30 ಹಾಗೂ ಡಿಸೆಂಬರ್‌ 4ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದ್ದಾರೆ.

“ಈ ನಾಟಕವು ಸತ್ಯ ಚರಿತ್ರೆಯ ಅನಾವರಣ. ಟಿಪ್ಪು ಕುರಿತು ಅತಿರಂಜಕ ಸುಳ್ಳು ಚರಿತ್ರೆಯೇ ನಿರ್ಮಾಣವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ನಡೆದಿರುವ ಮುಸ್ಲಿಂ ದೊರೆಗಳ ಆಕ್ರಮಣಕಾರಿ ಕೃತ್ಯಗಳನ್ನು ಅತ್ಯಂತ ಜಾಣತನದಿಂದ ಮುಚ್ಚಿಟ್ಟು ಬರೆದಿರುವ ಇತಿಹಾಸಕಾರರ ಚಿರಿತ್ರೆಯನ್ನೇ ಪಠ್ಯ ಪುಸ್ತಕವನ್ನಾಗಿಸಿ ಅದನ್ನೇ ಓದಿಸಿಕೊಂಡು ಬರಲಾಗಿದೆ. ಈ ಸುಳ್ಳಿನಲ್ಲಿ ಟಿಪ್ಪು ಸುಲ್ತಾನ್ ಸೇರುತ್ತಾನೆ” ಎಂದು ಕಾರ್ಯಪ್ಪ ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್‌ ಕುರಿತು ನಿಲ್ಲದ ಅಪಪ್ರಚಾರ

ಮೈಸೂರು ಆಳಿದ ಟಿಪ್ಪು ಸುಲ್ತಾನ್‌ರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಹಲವು ವರ್ಷಗಳಿಂದ ನಡೆಯುತ್ತಲೇ ಇವೆ. ಆದರೆ ಚಿಂತಕರು, ಇತಿಹಾಸಕಾರರು ಬೇರೆಯೇ ಸಂಗತಿಗಳನ್ನು ಹೇಳುತ್ತಾರೆ. ‘ನಾನುಗೌರಿ.ಕಾಂ’ ಈ ಕುರಿತು ಪದೇ ಪದೇ ವರದಿಗಳನ್ನು ಮಾಡಿದೆ.

ಬ್ರಾಹ್ಮಣರಿಗೆ ಟಿಪ್ಪು ಭೂದಾನ ಮಾಡಿದ್ದಿದೆ. ತುಳುನಾಡಿನ ದೇವಾಲಯಗಳಿಗೆ, ಕೇರಳದ ಮಲಬಾರ್ ಪ್ರದೇಶಕ್ಕೆ ಟಿಪ್ಪು ಸಾಕಷ್ಟು ಕೊಡುಗೆಗಳನ್ನು ಟಿಪ್ಪು ನೀಡಿದ್ದಾರೆ. ಟಿಪ್ಪು, ಅರ್ಹತೆ ಮತ್ತು ಸಾಮರ್ಥ್ಯದ ಆಧಾರದಲ್ಲಿ ಎಲ್ಲ ಧರ್ಮೀಯರಿಗೂ ತನ್ನ ಆಸ್ಥಾನದಲ್ಲಿ ಉನ್ನತ ಹುದ್ದೆಗಳನ್ನು ನೀಡಿದ್ದರು ಎಂಬುದು ಇತಿಹಾಸ ಪುಟಗಳಿಂದ ತಿಳಿದುಬರುತ್ತದೆ.

ಇವುಗಳನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಿವಾದಗಳ ಕುರಿತ ಸುದ್ದಿಗಳನ್ನು ಓದಲು ‘ಇಲ್ಲಿ ಕ್ಲಿಕ್’ ಮಾಡಿರಿ

“ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ” ಎನ್ನುತ್ತಾರೆ ‘ಟಿಪ್ಪು ಸುಲ್ತಾನ್‌’ ಕುರಿತು ಪುಸ್ತಕವನ್ನು ಬರೆದಿರುವ ‘ಇಸ್ಮತ್ ಫಜೀರ್‌’.

ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಂಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.

ಮಂಗಳೂರು ಭಾಗದ ಕ್ರೈಸ್ತರು ಬ್ರಿಟಿಷರೊಂದಿಗೆ ಕೈಜೋಡಿಸಿದ್ದನ್ನು ಟಿಪ್ಪು ಸಹಿಸಲಿಲ್ಲ. ಮುಸ್ಲಿಮರು ರಾಜ್ಯದ್ರೋಹ ಮಾಡಿದಾಗಲೂ ಟಿಪ್ಪು ವಿನಾಯಿತಿ ನೀಡಲಿಲ್ಲ. ಮಲಬಾರಿನ ನಾಯಕರುಗಳು, ಮಂಗಳೂರಿನ ಕ್ರೈಸ್ತರು, ಕೊಡವರು ಮುಂತಾದವರ ಜೊತೆ ಕ್ರೂರವಾಗಿ ವರ್ತಿಸಿದ್ದಕ್ಕೆ ರಾಜ್ಯದ್ರೋಹವೇ ಕಾರಣವಾಗಿತ್ತು. ಅದು ಅಂದಿನ ಆಡಳಿತದ ಪರಿಯಾಗಿತ್ತು ಎಂಬುದನ್ನು ಲೇಖಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಕೊಡಗಿನಲ್ಲಿ 70,000 ಹಿಂದೂಗಳನ್ನು ಟಿಪ್ಪು ಮತಾಂತರ ಮಾಡಿದ ಎನ್ನುತ್ತಾರೆ. ಆದರೆ ಟಿಪ್ಪು ನಿಧನದ 37 ವರ್ಷಗಳ ನಂತರದ ಜನಗಣತಿಯಲ್ಲಿ ಕೊಡಗಿನ ಜನಸಂಖ್ಯೆ 65,437 ಇರುವುದು ವಾಸ್ತವ. ಈ ಅಂಕಿಸಂಖ್ಯೆಗಳೇ ಈ ಮತಾಂತರದ ಸುಳ್ಳಿನ ಕಥೆಗೆ ಉತ್ತರ ಹೇಳುತ್ತವೆ. ಕ್ರೈಸ್ತರನ್ನು ಮತಾಂತರ ಮಾಡಲಾಯಿತು, 7,900 ದೇವಾಲಯಗಳನ್ನು ಧ್ವಂಸ ಮಾಡಲಾಯಿತು ಎಂಬುದೂ ಇಂತಹದ್ದೇ ಕಟ್ಟುಕತೆಗಳು. ಬಲವಂತದ ಮತಾಂತರ ಎಂಬುದು ಆಧಾರರಹಿತವಾಗಿದೆ ಎಂದು ಇತಿಹಾಸಕಾರರು ಪದೇಪದೇ ಹೇಳುತ್ತಿದ್ದಾರೆ.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು ಎಂದು ಚರಿತ್ರಾಕಾರರು ಉಲ್ಲೇಖಿಸುತ್ತಾರೆ.

(ಟಿಪ್ಪು ಕುರಿತ ವಿಶೇಷ ಬರಹಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಹೆಸರಿಗೆ ಮಸಿ ಬಳಿಯಲು ಮನುವಾದಿಗಳು ಎಷ್ಟೇ ಪ್ರಯತ್ನ ಮಾಡಿದರೂ, ಸಪಲರಾಗುವುದಿಲ್ಲ. ಏಕೆಂದರೆ ಟಿಪ್ಪುವಿನ ಸಾದನೆ ಅಜರಾಮರ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...