Homeಅಂತರಾಷ್ಟ್ರೀಯಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

ಭೀಕರ ಆರ್ಥಿಕ ಬಿಕ್ಕಟ್ಟಿನ ನಡುವೆ ಲಂಕಾ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಭೀಕರ ಆರ್ಥಿಕ ಹಿನ್ನಡೆಯಿಂದ ಭಾರಿ ಪ್ರತಿಭಟನೆ ಎದುರಿಸುತ್ತಿರುವ ನಡುವೆ ಶ್ರೀಲಂಕಾ ನೂತನ ಪ್ರಧಾನ ಮಂತ್ರಿಯಾಗಿ ದೇಶದ ಹಿರಿಯ ರಾಜಕಾರಣಿ ರನಿಲ್‌‌‌‌ ವಿಕ್ರಮಸಿಂಘೆ ಅವರು ರಾಷ್ಟ್ರಪತಿ ಗೋಟಾಬಯ ರಾಜಪಕ್ಸೆ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೇಶದ ಆರ್ಥಿಕತೆ ಹದಗೆಡುತ್ತಿರುವುದರಿಂದ ರಾಷ್ಟ್ರಪತಿ ಕೂಡಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಈ ಮಧ್ಯೆ ಗೋಟಾಬಯ ರಾಜಪಕ್ಸೆ ಅವರಿಂದ ವಿಕ್ರಮಸಿಂಘೆ ಹೊಸ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ, ರಾಜಕೀಯ ನಾಯಕರಾಗಿರುವ ಅವರ ಪುತ್ರ ನಮಲ್ ಮತ್ತು ಅವರ 15 ಮಿತ್ರರಿಗೆ ದೇಶ ಬಿಟ್ಟು ತೆರಳದಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರದ ಕೃತ್ಯಗಳನ್ನು ನ್ಯಾಯಾಲಯವು ಅವರ ಮೇಲೆ ಹೊರಿಸಿದೆ.

ಇದನ್ನೂ ಓದಿ: ರಾಜೀನಾಮೆ ನಂತರವೂ ಮುಂದುವರೆದ ಪ್ರತಿಭಟನೆ: ನೌಕಾನೆಲೆಯಲ್ಲಿ ಅವಿತುಕೂತ ಮಾಜಿ ಪ್ರಧಾನಿ ಮಹಿಂದ ರಾಜಪಕ್ಸೆ

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸೋಮವಾರ ನಡೆದ ಗುಂಪು ದಾಳಿಯ ಬಗ್ಗೆ ತನಿಖೆ ನಡೆಸುವಂತೆ ರಾಜಧಾನಿ ಕೊಲಂಬೊದಲ್ಲಿನ ಮ್ಯಾಜಿಸ್ಟ್ರೇಟ್ ಪೊಲೀಸರನ್ನು ಕೇಳಿದ್ದಾರೆ. ಈ ದಾಳಿಯಿಂದಾಗಿ ಹಿಂಸಾಚಾರ ಭುಗಿಲೆದ್ದು, ಒಂಬತ್ತು ಜನರು ಬಲಿಯಾಗಿದ್ದಾರೆ.

ರಾಜಪಕ್ಸೆ ಮತ್ತು ಅವರ ಸಹಚರರ ವಿರುದ್ಧ ಬಂಧನ ವಾರಂಟ್‌ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ, ಆದರೆ ಮ್ಯಾಜಿಸ್ಟ್ರೇಟ್ ಅದನ್ನು ತಿರಸ್ಕರಿಸಿದರು ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಎಎಫ್‌ಪಿಗೆ ತಿಳಿಸಿದ್ದಾರೆ.

ಸೋಮವಾರದ ಹಿಂಸಾಚಾರದ ಸಂತ್ರಸ್ತ್ರರು ರಾಜಪಕ್ಸೆ ಮತ್ತು ಅವರ ಪ್ರಮುಖ ಸಹಾಯಕರು ತಮ್ಮ ಸುಮಾರು 3,000 ಬೆಂಬಲಿಗರನ್ನು ರಾಜಧಾನಿಗೆ ಕರೆತಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಲು ಪ್ರೇರೇಪಿಸಿದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಓದುಗರ ಪತ್ರ: ಅಯೋಧ್ಯೆಯಲ್ಲಿ ಶ್ರೀರಾಮನಿದ್ದ ಎಂಬುದಕ್ಕೆ ಕೆಲವು ಪ್ರಶ್ನೆಗಳು

ರಾಜಪಕ್ಸೆ ಅವರ ಬೆಂಬಲಿಗರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಈ ದಾಳಿಯ ನಂತರ ಆಸ್ಪತ್ರೆಗೆ ದಾಖಲಾಗಿರುವ ಕನಿಷ್ಠ 225 ಜನರಲ್ಲಿ ಬೌದ್ಧ ಸನ್ಯಾಸಿಗಳು ಮತ್ತು ಕ್ಯಾಥೋಲಿಕ್ ಪಾದ್ರಿಗಳು ಸೇರಿದ್ದಾರೆ.

ಈ ಹಿಂಸಾಚಾರಗಳು ಶೀಘ್ರದಲ್ಲೇ ದೇಶಾದ್ಯಂತ ಹರಡಿದ್ದು, ರಾಜಪಕ್ಸೆ ಬೆಂಬಲಿಗರ ಹಲವಾರು ಮನೆಗಳನ್ನು ಸುಟ್ಟುಹಾಕಲಾಗಿದೆ. ಇದರ ನಂತರ ಪ್ರಧಾನ ಮಂತ್ರಿ ರಾಜೀನಾಮೆ ನೀಡಿದ್ದು, ಅವರನ್ನು ಭಾರೀ ಶಸ್ತ್ರಸಜ್ಜಿತ ಪಡೆಗಳು ಅವರ ಮನೆಯಿಂದ ಸ್ಥಳಾಂತರಿಸಿದ್ದಾರೆ. ಪ್ರಸ್ತುತ ಅವರು ದೇಶದ ಪೂರ್ವದಲ್ಲಿರುವ ನೌಕಾ ನೆಲೆಯಲ್ಲಿ ನೆಲೆಸಿದ್ದಾರೆ ಎಂದು ವರದಿಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...