Homeಮುಖಪುಟರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಮೇಲ್ಮನೆಗೆ ನಾಮಕರಣ ಮಾಡಿದರು. ಅವರಿಗೆ ಸದನದಲ್ಲಿ ಸೀಟು ಸಂಖ್ಯೆ 131 ನೀಡಲಾಗಿದೆ.

ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸದಸ್ಯರು ಗೊಗೊಯ್ ಅವರ ನೇಮಕವನ್ನು ವಿರೋಧಿಸಿದರು. ಶೇಮ್‌ ಎಂಬ ಘೋಷಣೆಗಳನ್ನು ಕೂಗಿದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮತ್ತು ಎಂಡಿಎಂಕೆ ಕೂಡ ಪ್ರತಿಭಟನೆಯಲ್ಲಿ ಸೇರಿಕೊಂಡವು.

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

ನ್ಯಾಯಮೂರ್ತಿ ಗೊಗೊಯ್ ಅವರು 2019 ರ ನವೆಂಬರ್‌ನಲ್ಲಿ ನಿವೃತ್ತಿಯಾದ ನಾಲ್ಕು ತಿಂಗಳ ನಂತರ ಮಾರ್ಚ್ 16 ರಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರ ವಿರುದ್ಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಮದನ್ ಲೋಕೂರ್, ಎ.ಕೆ.ಪಟ್ನಾಯಕ್ ಮತ್ತು ಕುರಿಯನ್ ಜೋಸೆಫ್ ಖಂಡಿಸಿದ್ದಾರೆ. ಆದರೆ ಗೊಗೊಯ್ ಅವರು ತಮ್ಮ ನಾಮನಿರ್ದೇಶನವನ್ನು ಸಮರ್ಥಿಸಿಕೊಂಡಿದ್ದಾರೆ, ಶಾಸಕಾಂಗ ಮತ್ತು ನ್ಯಾಯಾಂಗವು ರಾಷ್ಟ್ರ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂಬ ದೃಢನಿಶ್ಚಯದಿಂದಾಗಿ ಈ ಪ್ರಸ್ತಾಪವನ್ನು ಸ್ವೀಕರಿಸಿದ್ದೇನೆ ಎಂದು ಗೊಗೊಯ್‌ ಹೇಳಿದ್ದಾರೆ.

ಕೇವಲ ನಾಲ್ಕು ತಿಂಗಳ ಹಿಂದೆ ದೇಶದ ಉನ್ನತ ನ್ಯಾಯಾಧೀಶರಾಗಿ ನಿವೃತ್ತರಾದ ನ್ಯಾಯಮೂರ್ತಿ ಗೊಗೊಯ್ ಅವರು ಸಂಸತ್ತಿನಲ್ಲಿ ತಮ್ಮ ಉಪಸ್ಥಿತಿಯು “ನ್ಯಾಯಾಂಗದ ಅಭಿಪ್ರಾಯಗಳನ್ನು ಶಾಸಕಾಂಗ ಮತ್ತು ಉಪಾಧ್ಯಕ್ಷರ ಮುಂದೆ ಮಂಡಿಸಲು ಒಂದು ಅವಕಾಶವಾಗಿರುತ್ತದೆ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗೊಗೊಯ್ ಅವರನ್ನು ಸ್ವಾಗತಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು: “ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬರುವ ಅನೇಕ ಶ್ರೇಷ್ಠ ವ್ಯಕ್ತಿಗಳು ಒಳಗೊಂಡಂತೆ ರಾಜ್ಯಸಭೆಯು ಒಂದು ದೊಡ್ಡ ಸಂಪ್ರದಾಯವನ್ನು ಹೊಂದಿದೆ. ಇಂದು ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಗೊಗೊಯ್ ಖಂಡಿತವಾಗಿಯೂ ಅವರ ಅತ್ಯುತ್ತಮ ಕೊಡುಗೆಯನ್ನು ನೀಡುತ್ತಾರೆ. ಕಾಂಗ್ರೆಸ್‌ ಹೊರನಡೆಯುವ ಮೂಲಕ ಅನ್ಯಾಯ ಮಾಡಿದೆ” ಎಂದಿದ್ದಾರೆ.

ಪ್ರಮಾಣ ವಚನ ಸಂದರ್ಭದಲ್ಲಿ ನ್ಯಾಯಮೂರ್ತಿ ಗೊಗೊಯ್ ಅವರ ಪತ್ನಿ ರೂಪಂಜಲಿ ಗೊಗೊಯ್, ಮಗಳು ಮತ್ತು ಅಳಿಯ ಸಂಸತ್ತಿನಲ್ಲಿ ಉಪಸ್ಥಿತರಿದ್ದರು.

“ನಮ್ಮ ಸಂವಿಧಾನವು ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರಗಳನ್ನು ಬೇರ್ಪಡಿಸುವುದನ್ನು ಆಧರಿಸಿದೆ. ನ್ಯಾಯಾಂಗವು ನಂಬಿಕೆ ಮತ್ತು ವಿಶ್ವಾಸಗಳ ಗ್ರಹಿಕೆಗೆ ತಕ್ಕಂತೆ ಅಭಿವೃದ್ಧಿ ಹೊಂದುತ್ತದೆ. ಆದರೆ ಅವರು ಅದನ್ನು ಸೋಲಿಸಿದ್ದಾರೆ” ಎಂದು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ತಮ್ಮ ಮಾಜಿ ಸಹೋದ್ಯೋಗಿಯನ್ನು ಟೀಕಿಸಿದ್ದಾರೆ. ಅವರ ನಿರ್ಧಾರವು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಸಾಮಾನ್ಯ ಜನರ ವಿಶ್ವಾಸವನ್ನು ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...