Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...