Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...