Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...