Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...