Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...