Homeಕರ್ನಾಟಕರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ...

ರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ ಡಿಆರ್‌ಐ ಮಾಹಿತಿ

- Advertisement -
- Advertisement -

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟರಾದ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು 31 ಕೆಜಿಗೂ ಹೆಚ್ಚು ಚಿನ್ನವನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಕೋರ್ಟ್‌ಗೆ ಹೇಳಿಕೊಂಡಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣದ ಎರಡನೇ ಆರೋಪಿ ರಾಜು (36)ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡುವುದನ್ನು ಡಿಆರ್‌ಐ ಆಕ್ಷೇಪಿಸಿ ತನ್ನ ತನಿಖೆಯ ಹೊಸ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಏಪ್ರಿಲ್ 7 ರಂದು ಸಿಸಿಎಚ್ -64 ಎಲ್‌ಎಕ್ಸ್‌ಐಐ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಐ ಪಿ ನಾಯಕ್ ಅವರು ರಾಜು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

33 ವರ್ಷದ ರನ್ಯಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ತೂಕದ 12.56 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಬಂಧಿಸಲಾಗಿತ್ತು. ಆರು ದಿನಗಳ ನಂತರ, ಮಾರ್ಚ್ 9 ರಂದು ಡಿಆರ್‌ಐ ರಾಜು ಅವರನ್ನು ಬಂಧಿಸಿತ್ತು.

ರನ್ಯಾ ಮತ್ತು ರಾಜು ಇಬ್ಬರೂ ಚಿನ್ನದ ಕಳ್ಳಸಾಗಣೆಯಲ್ಲಿ ಮತ್ತು ಖರೀದಿಗೆ ಅಗತ್ಯವಾದ ಹಣವನ್ನು ರವಾನಿಸಲು ಹವಾಲಾ ವಹಿವಾಟಿನಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಡಿಆರ್‌ಐ ಆಕ್ಷೇಪಣೆಗಳನ್ನು ಸಲ್ಲಿಸಿತ್ತು. ಈ ಇಬ್ಬರು 31 ಕೆಜಿಗಿಂತ ಹೆಚ್ಚು ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದು ಇದು “ಜಾಮೀನು ರಹಿತ ಅಪರಾಧ” ಎಂದು ಡಿಆರ್‌ಐ ನ್ಯಾಯಾಲಯಕ್ಕೆ ತಿಳಿಸಿದೆ.

ರಾಜು ಅಮೇರಿಕಾದ ನಾಗರಿಕರಾಗಿದ್ದು, ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಪರಾರಿಯಾಗುವ ಸಾಧ್ಯತೆ ಇದೆ ಎಂದು ಡಿಆರ್‌ಐ ವಾದಿಸಿದೆ. ಅವರು ಈ ಹಿಂದೆ ದೇಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಡಿಆರ್‌ಐ ಹೇಳಿದ್ದು, ಅವರ ಕೃತ್ಯಗಳ ಬಗ್ಗೆ ಅವರಿಗೆ ಅರಿವಿತ್ತು ಎಂದು ಹೇಳಿದೆ.

“ಅರ್ಜಿದಾರರು (ರಾಜು) ಮತ್ತು ಆರೋಪಿ 1 (ರನ್ಯಾ ರಾವ್) ಇಬ್ಬರೂ ಸ್ವಯಂಪ್ರೇರಿತ ಹೇಳಿಕೆಗಳನ್ನು ನೀಡಿ, ಆರೋಪಿ 3 (ಸಾಹಿಲ್ ಸಕಾರಿಯಾ ಜೈನ್) ಸಹಾಯದಿಂದ ಸರಕು/ಚಿನ್ನದ ಕಳ್ಳಸಾಗಣೆ ಮತ್ತು ಭಾರತದಲ್ಲಿ ಆಭರಣಗಳ ರೂಪದಲ್ಲಿ ಮಾರಾಟ ಮಾಡಿರುವುದನ್ನು ಬಹಿರಂಗಪಡಿಸಿದ್ದಾರೆ. ಇದಲ್ಲದೆ, ಅವರು ಹವಾಲಾ ವ್ಯವಹಾರದಲ್ಲಿಯೂ ಭಾಗಿಯಾಗಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ” ಎಂದು ಡಿಆರ್‌ಐ ಹೇಳಿಕೊಂಡಿದೆ.

ರಾಜು ಅವರು ಅಮೆರಿಕಾ ಪ್ರಜೆಯಾಗಿದ್ದು, ಅವರ ವಿಧವೆ ತಾಯಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ರಾಜು ಅವರ ವಕೀಲರು ವಾದಿಸಿದ್ದಾರೆ. ರಾಜು ಅವರ ತಾಯಿಗೆ ಬೆಂಗಳೂರಿನಲ್ಲಿ “ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು” ಹೊಂದಿದ್ದಾರೆ, ಆದ್ದರಿಂದ ಅವರು ತಲೆಮರೆಸಿಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಅರ್ಜಿದಾರ ರಾಜು ಅವರಿಂದ ಏನನ್ನೂ ವಶಪಡಿಸಿಕೊಳ್ಳಲಾಗಿಲ್ಲ ಮತ್ತು ಅವರ ವಿರುದ್ಧ ಯಾವುದೇ ದೋಷಾರೋಪಣೆಯ ವಸ್ತುಗಳು ಕಂಡುಬಂದಿಲ್ಲ” ಎಂದು ರಾಜು ಪರ ವಕೀಲರು ಪ್ರತಿಪಾದಿಸಿದರು. ರಾಜು ದುಬೈ ಮತ್ತು ಇತರ ದೇಶಗಳಲ್ಲಿ ಚಿನ್ನದ ವ್ಯವಹಾರವನ್ನು ಹೊಂದಿದ್ದರು, ಆದ್ದರಿಂದ ಕಸ್ಟಮ್ಸ್ ಕಾಯ್ದೆ, 1962 ಅವರಿಗೆ ಅನ್ವಯಿಸಲಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅರ್ಜಿದಾರ (ರಾಜು) ದುಬೈನಲ್ಲಿ ಆರೋಪಿ 1 (ರನ್ಯಾ) ಗೆ ಚಿನ್ನವನ್ನು ಮಾರಾಟ ಮಾಡಿದ್ದಾರೆ. ಆದರೆ ಆರೋಪಿ ರನ್ಯಾ ಅದನ್ನು ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದಾರೆ ಅವರಿಗೆ ತಿಳಿದಿಲ್ಲ” ಎಂದು ಅವರ ವಕೀಲರು ಪ್ರತಿಪಾದಿಸಿದ್ದಾರೆ. ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ ಅವರ ಅರ್ಜಿಯನ್ನು ವಜಾ ಮಾಡಿದೆ.

“ಅರ್ಜಿದಾರ (ರಾಜು) ಮತ್ತು ಆರೋಪಿ 1 (ರನ್ಯಾ) ಇಬ್ಬರ ಸ್ವಯಂಪ್ರೇರಿತ ಹೇಳಿಕೆಯ ಪ್ರಕಾರ, ಅವರು 20-25 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಮತ್ತು ಅದೇ ದಿನ ಭಾರತಕ್ಕೆ ಮರಳಿದ್ದಾರೆ. ಇದು ಅವರ ಕಾರ್ಯವೈಖರಿಯನ್ನು ಬಹಿರಂಗಪಡಿಸಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಇಡೀ ಸಂಗತಿಯನ್ನು ಪರಿಗಣಿಸಿದಾಗ, ಈ ಪ್ರಕರಣದಲ್ಲಿ ಸಮುದಾಯದ ಹಿತಾಸಕ್ತಿ ಇದೆ ಎಂದು ತಿಳಿದುಬಂದಿದೆ. ಅರ್ಜಿದಾರರಿಗೆ ಜಾಮೀನು ನೀಡಿದರೆ ಪಲಾಯನ ಮಾಡುವ ಅಪಾಯವಿರುತ್ತದೆ ಮತ್ತು ಅದು ಸಮಾಜಕ್ಕೆ ತಪ್ಪು ಸಂಕೇತವನ್ನು ನೀಡುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅರ್ಜಿದಾರರು ಜಾಮೀನು ಮಂಜೂರಾತಿಗೆ ಅರ್ಹರಲ್ಲ ಎಂದು ನಾನು ಅಭಿಪ್ರಾಯಪಡುತ್ತೇನೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...