Homeಚಳವಳಿಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕ್ರಾಂತಿಕಾರಿ ಕವಿ- ಸಾಮಾಜಿಕ ಹೋರಾಟಗಾರ ವರವರ ರಾವ್ ಅವರ ಆರೋಗ್ಯ ಹದಗೆಡುತ್ತಿದ್ದು ಆದ್ದರಿಂದ ಅವರನ್ನು ಬಿಡುಗಡೆ ಮಾಡಿ ಆಸ್ಪತ್ರಗೆ ಸೇರಿಸಬೇಕು ಎಂದು ಬಾಂಬೆ ಹೈಕೋರ್ಟ್‌ಗೆ ಅವರ ಕುಟುಂಬ ಮನವಿ ಮಾಡಿದ್ದ ಹಿನ್ನಲೆಯಲ್ಲಿ ನ್ಯಾಯಾಲಯವು, ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ಹೇಳಿದೆ.

ಸಾಮಾಜಿಕ ಕಾರ್ಯಕರ್ತೆ ವಕೀಲೆ ಇಂದಿರಾ ಜೈಸಿಂಗ್ ಹೈಕೋರ್ಟ್‌ನಲ್ಲಿ, ಅವರ ಆರೋಗ್ಯವು ಕ್ಷೀಣಿಸುತ್ತಿದೆ. ಅಷ್ಟೆ ಅಲ್ಲದೆ ಅವರಿಗೆ ಬುದ್ಧಿಮಾಂದ್ಯತೆ ಇದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ನ್ಯಾಯದಿಂದ ಓಡಿ ಹೋಗಲಿದ್ದಾರೆಯೆ ಎಂದು ಪ್ರಶ್ನಿಸಿದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ವೀಡಿಯೊ ಕರೆಯನ್ನು ಶೀಘ್ರದಲ್ಲಿಯೇ ವ್ಯವಸ್ಥೆಗೊಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಾಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳ ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟೋಡಿಯಲ್ ಸಾವು ಆಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು.

ಟಿವಿ ಆಂಕರ್ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದರಿಂದ, ಈ ವಾರದಾದ್ಯಂತ ತಲೋಜಾ ಜೈಲು ಸುದ್ದಿಯಲ್ಲಿತ್ತು. ಅರ್ನಾಬ್‌ಗೆ ನಿನ್ನೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ವೈಯಕ್ತಿಕ ಸ್ವಾತಂತ್ರ್ಯದ ತತ್ವವನ್ನು ಎತ್ತಿಹಿಡಿಯ ಬೇಕು ಎಂದು ಹೈಕೋರ್ಟ್‌ಗೆ ಸಂದೇಶ ಕಳುಹಿಸಿದೆ.

ವರವರ ರಾವ್ ಸೇರಿದಂತೆ ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಇತರ ಸಾಮಾಜಿಕ ಕಾರ್ಯಕರ್ತರಾದ ಸುಧಾ ಭರದ್ವಾಜ್ ಮತ್ತು ಸ್ಟಾನ್ ಸ್ವಾಮಿಯನ್ನೂ ಸಹ ಇದೇ ಮಾನದಂಡದಡಿ ಯಾಕೆ ಬಿಡುಗಡೆ ಮಾಡಬಾರದು ಎಂದು ಪ್ರಶ್ನಿಸಲಾಗುತ್ತಿದೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತು.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...