Homeಚಳವಳಿಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕ್ರಾಂತಿಕಾರಿ ಕವಿ- ಸಾಮಾಜಿಕ ಹೋರಾಟಗಾರ ವರವರ ರಾವ್ ಅವರ ಆರೋಗ್ಯ ಹದಗೆಡುತ್ತಿದ್ದು ಆದ್ದರಿಂದ ಅವರನ್ನು ಬಿಡುಗಡೆ ಮಾಡಿ ಆಸ್ಪತ್ರಗೆ ಸೇರಿಸಬೇಕು ಎಂದು ಬಾಂಬೆ ಹೈಕೋರ್ಟ್‌ಗೆ ಅವರ ಕುಟುಂಬ ಮನವಿ ಮಾಡಿದ್ದ ಹಿನ್ನಲೆಯಲ್ಲಿ ನ್ಯಾಯಾಲಯವು, ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ಹೇಳಿದೆ.

ಸಾಮಾಜಿಕ ಕಾರ್ಯಕರ್ತೆ ವಕೀಲೆ ಇಂದಿರಾ ಜೈಸಿಂಗ್ ಹೈಕೋರ್ಟ್‌ನಲ್ಲಿ, ಅವರ ಆರೋಗ್ಯವು ಕ್ಷೀಣಿಸುತ್ತಿದೆ. ಅಷ್ಟೆ ಅಲ್ಲದೆ ಅವರಿಗೆ ಬುದ್ಧಿಮಾಂದ್ಯತೆ ಇದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ನ್ಯಾಯದಿಂದ ಓಡಿ ಹೋಗಲಿದ್ದಾರೆಯೆ ಎಂದು ಪ್ರಶ್ನಿಸಿದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ವೀಡಿಯೊ ಕರೆಯನ್ನು ಶೀಘ್ರದಲ್ಲಿಯೇ ವ್ಯವಸ್ಥೆಗೊಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಾಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳ ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟೋಡಿಯಲ್ ಸಾವು ಆಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು.

ಟಿವಿ ಆಂಕರ್ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದರಿಂದ, ಈ ವಾರದಾದ್ಯಂತ ತಲೋಜಾ ಜೈಲು ಸುದ್ದಿಯಲ್ಲಿತ್ತು. ಅರ್ನಾಬ್‌ಗೆ ನಿನ್ನೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ವೈಯಕ್ತಿಕ ಸ್ವಾತಂತ್ರ್ಯದ ತತ್ವವನ್ನು ಎತ್ತಿಹಿಡಿಯ ಬೇಕು ಎಂದು ಹೈಕೋರ್ಟ್‌ಗೆ ಸಂದೇಶ ಕಳುಹಿಸಿದೆ.

ವರವರ ರಾವ್ ಸೇರಿದಂತೆ ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಇತರ ಸಾಮಾಜಿಕ ಕಾರ್ಯಕರ್ತರಾದ ಸುಧಾ ಭರದ್ವಾಜ್ ಮತ್ತು ಸ್ಟಾನ್ ಸ್ವಾಮಿಯನ್ನೂ ಸಹ ಇದೇ ಮಾನದಂಡದಡಿ ಯಾಕೆ ಬಿಡುಗಡೆ ಮಾಡಬಾರದು ಎಂದು ಪ್ರಶ್ನಿಸಲಾಗುತ್ತಿದೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತು.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...