Homeಚಳವಳಿಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕ್ರಾಂತಿಕಾರಿ ಕವಿ- ಸಾಮಾಜಿಕ ಹೋರಾಟಗಾರ ವರವರ ರಾವ್ ಅವರ ಆರೋಗ್ಯ ಹದಗೆಡುತ್ತಿದ್ದು ಆದ್ದರಿಂದ ಅವರನ್ನು ಬಿಡುಗಡೆ ಮಾಡಿ ಆಸ್ಪತ್ರಗೆ ಸೇರಿಸಬೇಕು ಎಂದು ಬಾಂಬೆ ಹೈಕೋರ್ಟ್‌ಗೆ ಅವರ ಕುಟುಂಬ ಮನವಿ ಮಾಡಿದ್ದ ಹಿನ್ನಲೆಯಲ್ಲಿ ನ್ಯಾಯಾಲಯವು, ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ಹೇಳಿದೆ.

ಸಾಮಾಜಿಕ ಕಾರ್ಯಕರ್ತೆ ವಕೀಲೆ ಇಂದಿರಾ ಜೈಸಿಂಗ್ ಹೈಕೋರ್ಟ್‌ನಲ್ಲಿ, ಅವರ ಆರೋಗ್ಯವು ಕ್ಷೀಣಿಸುತ್ತಿದೆ. ಅಷ್ಟೆ ಅಲ್ಲದೆ ಅವರಿಗೆ ಬುದ್ಧಿಮಾಂದ್ಯತೆ ಇದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ನ್ಯಾಯದಿಂದ ಓಡಿ ಹೋಗಲಿದ್ದಾರೆಯೆ ಎಂದು ಪ್ರಶ್ನಿಸಿದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ವೀಡಿಯೊ ಕರೆಯನ್ನು ಶೀಘ್ರದಲ್ಲಿಯೇ ವ್ಯವಸ್ಥೆಗೊಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಾಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳ ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟೋಡಿಯಲ್ ಸಾವು ಆಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು.

ಟಿವಿ ಆಂಕರ್ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದರಿಂದ, ಈ ವಾರದಾದ್ಯಂತ ತಲೋಜಾ ಜೈಲು ಸುದ್ದಿಯಲ್ಲಿತ್ತು. ಅರ್ನಾಬ್‌ಗೆ ನಿನ್ನೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ವೈಯಕ್ತಿಕ ಸ್ವಾತಂತ್ರ್ಯದ ತತ್ವವನ್ನು ಎತ್ತಿಹಿಡಿಯ ಬೇಕು ಎಂದು ಹೈಕೋರ್ಟ್‌ಗೆ ಸಂದೇಶ ಕಳುಹಿಸಿದೆ.

ವರವರ ರಾವ್ ಸೇರಿದಂತೆ ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಇತರ ಸಾಮಾಜಿಕ ಕಾರ್ಯಕರ್ತರಾದ ಸುಧಾ ಭರದ್ವಾಜ್ ಮತ್ತು ಸ್ಟಾನ್ ಸ್ವಾಮಿಯನ್ನೂ ಸಹ ಇದೇ ಮಾನದಂಡದಡಿ ಯಾಕೆ ಬಿಡುಗಡೆ ಮಾಡಬಾರದು ಎಂದು ಪ್ರಶ್ನಿಸಲಾಗುತ್ತಿದೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತು.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...