Homeಮುಖಪುಟಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್‌‌‌‌: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ದ ಪ್ರಕರಣ

ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್‌‌‌‌: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ದ ಪ್ರಕರಣ

- Advertisement -
- Advertisement -

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಜಬಲ್‌ಪುರ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್ ಶ್ರೀವಾಸ್ತವ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯು ಪತಿಯೊಂದಿಗೆ ಮಹಿಳಾ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಿ ಶ್ರೀವಾಸ್ತವ್ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಜಬಲ್‌‌ಪುರ್‌ ಪೊಲೀಸರ ಪ್ರಕಾರ, ಆರೋಪಿ ಶ್ರೀವಾಸ್ತವ್‌‌‌‌‌ ಮಹಿಳೆಯ ಪರಿಚಯದವರಾಗಿದ್ದು ಆಗಾಗ್ಗೆ ಮಹಿಳೆಯ ಮನೆಗೆ ತೆರಳುತ್ತಿದ್ದರು. ಮಹಿಳೆಯ ಪತಿ ಸರ್ಕಾರಿ ಉದ್ಯೋಗಿಯಾಗಿರುವ ಕಾರಣ ಕೆಲಸದ ಕಾರಣಕ್ಕೆ ಮನೆಯಿಂದ ದೂರವಿದ್ದರು. ಇಂತಹ ಸಮಯದಲ್ಲಿ ಮನೆಗೆ ಭೇಟಿ ನೀಡಿದ್ದ ಶ್ರೀವಾಸ್ತವ್‌‌‌ ಜ್ಯೂಸ್‌ಗೆ ಮಾದಕ ದ್ರವ್ಯವನ್ನು ಸೇರಿಸಿದ್ದು, ಇದರಿಂದಾಗಿ ಮಹಿಳೆಯು ಪ್ರಜ್ಞೆ ಕಳೆದುಕೊಂಡಿದ್ದರು. ಆ ಹೊತ್ತಲ್ಲಿ ಅವರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ಈ ವೇಳೆ ಶ್ರೀವಾಸ್ತವ್‌ ಕೃತ್ಯದ ಚಿತ್ರಗಳನ್ನು ಸೆರೆಹಿಡಿದಿದ್ದು, ಅದರ ವಿಡಿಯೋವನ್ನು ಹಿಡಿದು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ಆದರೆ 2020 ರ ಸೆಪ್ಟೆಂಬರ್‌‌ನಲ್ಲಿ ಮಹಿಳೆಯು ಗಂಡನೊಂದಿಗೆ ತೆರಳಿದ್ದು, ಶ್ರೀವಾಸ್ತವ್‌ ಮಹಿಳೆಯನ್ನು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ ಮತ್ತು ಮಹಿಳೆಯು ಅದಕ್ಕೆ ಒಪ್ಪದೆ ಇದ್ದಾಗ ಕೃತ್ಯದ ವಿಡಿಯೋವನ್ನು ಪತಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯು ದೂರಿದ್ದಾರೆ.

ಜಬಲ್ಪುರದ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, “ಆತನು ಮಹಿಳೆಯು ತನ್ನ ಬಳಿಗೆ ಹಿಂತಿರುಗಬೇಕು ಅಥವಾ 10 ಲಕ್ಷ ರೂ. ನೀಡುವಂತೆ ಕೇಳಿಕೊಂಡಿದ್ದನು. ಇದಕ್ಕೆ ಮಹಿಳೆಯು ಒಪ್ಪದೆ ಇದ್ದಾಗ ಮಹಿಳೆಯ ಗಂಡನಿಗೆ ವಿಡಿಯೋ ಮತ್ತು ಪೋಟೋಗಳನ್ನು ಕಳುಹಿಸಿದ್ದನು. ಈ ವೇಳೆ ವಿಷಯವು ಬೆಳಕಿಗೆ ಬಂದಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಘಟನೆಯ ಬಗ್ಗೆ ಮಹಿಳೆಯು ಪತಿಗೆ ಮಾಹಿತಿ ನೀಡಿದ್ದು, ನಂತರ ಇಬ್ಬರು ಪೊಲೀಸ್ ಠಾಣೆಗೆ ತೆರಳಿ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2-ಎನ್), 506 I, 284 ಮತ್ತು 384 ರ ಅಡಿಯಲ್ಲಿ ಪೊಲೀಸರು ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪೊಲೀಸ್ ಸೂಪರಿಂಟೆಂಡೆಂಟ್‌ ಆಗಿರುವ ಸಿದ್ಧಾರ್ಥ್ ಬಹುಗುಣ, “ಆರೋಪಿಯು ಬಿಜೆಪಿಯ ಯುವ ಮೋರ್ಚಾದ ಸ್ಥಳೀಯ ನಾಯಕ. ಮಹಿಳೆಯ ದೂರಿನ ಆಧಾರದ ಮೇಲೆ ನಾವು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಮತ್ತು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಬಿಜೆಪಿ ಮುಖಂಡನೂ ಎಲ್ಲ ಮಿತಿಗಳನ್ನು ಮೀರಿದ್ದಾನೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಪಕ್ಷವು ಆಕ್ರೋಶ ವ್ಯಕ್ತಪಡಿಸಿದೆ.

“ನನಗೆ ಈ ವಿಷಯದ ಬಗ್ಗೆ ತಿಳಿದಿಲ್ಲ ಆದರೆ ಕಾನೂನು ತನ್ನ ಕ್ರಮವನ್ನು ಕೈಗೊಳ್ಳುತ್ತದೆ” ಎಂದು ರಾಜ್ಯದ ಬಿಜೆಪಿಯ ವಕ್ತಾರ ರಜನೀಶ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...