Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...