Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...