Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...