Homeಮುಖಪುಟಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಉತ್ತರ ಪ್ರದೇಶ ದೇವಸ್ಥಾನದಲ್ಲಿ ಅತ್ಯಾಚಾರ, ಕೊಲೆ: ಅರ್ಚಕನ ಬಂಧನ

ಈ ನಡುವೆ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೊಬ್ಬರು ಆಕ್ಷೇಪಾರ್ಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದ ಬಡೌನ್ ಜಿಲ್ಲೆಯ ಗ್ರಾಮವೊಂದರಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಅವರ ಮನೆ ಎದುರು ಬಿಸಾಕಿ ಹೋದ ಅಮಾನವೀಯ ಘಟನೆ ಭಾನುವಾರ ನಡೆದಿತ್ತು. ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿತ್ತು.

ಘಟನೆ ನಡೆದ ನಾಲ್ಕು ದಿನಗಳ ನಂತರ ಪೊಲೀಸರು ಪ್ರಮುಖ ಆರೋಪಿ ದೇವಸ್ಥಾನದ ಅರ್ಚಕ ಸತ್ಯಾನಂದ ಎಂಬುವವರನ್ನು ಬಂಧಿಸಿದ್ದಾರೆ. ಪಕ್ಕದ ಗ್ರಾಮದ ಭಕ್ತರೊಬ್ಬರ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದ ಅವನನ್ನು ಗುರುವಾರ ತಡ ರಾತ್ರಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಪ್ರಶಾಂತ್ ಹೇಳಿಕೆ ಆಧರಿಸಿ ಪಿಟಿಐ ವರದಿ ಮಾಡಿದೆ.

ಅರ್ಚಕ ಮತ್ತು ಆತನ ಇಬ್ಬರು ಸಹಚರರು ಭಾನುವಾರ ರಾತ್ರಿ ಆಕೆಯನ್ನು ಅವರ ಮನೆ ಮುಂದೆ ಬಿಟ್ಟು ಹೋಗಿದ್ದರು ಎಂಬ ಆರೋಪವಿದ್ದು, ನಂತರ ಅತಿಯಾದ ರಕ್ತಸ್ರಾವದಿಂದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಇನ್ನಿಬ್ಬರು ಆರೋಪಿಗಳನ್ನು ಬುಧವಾರವೇ ಬಂಧಿಸಲಾಗಿತ್ತು.

ಸ್ಥಳೀಯರೊಬ್ಬರು ಹೇಳುವಂತೆ, ಸಾವಿಗೀಡಾದ ಮಹಿಳೆ ನಿಯಮಿತವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ರವಿವಾರ ಏನಾಯ್ತು ಎಂಬುದು ಯಾರಿಗೂ ಗೊತ್ತಿಲ್ಲ. ಗ್ರಾಮದ ಪ್ರಮುಖ ರಸ್ತೆಯ ಸಮೀಪದಲ್ಲೇ ದೇವಸ್ಥಾನವಿದ್ದು, ಅದರ ಆವರಣದ ಕೋಣೆಯೊಂದರಲ್ಲಿ ಅರ್ಚಕ ಸತ್ಯಾನಂದ ವಾಸವಾಗಿದ್ದಾರೆ. ಸ್ಥಳೀಯರ ಪ್ರಕಾರ, ಸತ್ಯಾನಂದ 5 ಬರ್ಷದ ಹಿಂದೆ ಗ್ರಾಮಕ್ಕೆ ಬಂದಿದ್ದು, ಜನರೊಡನೆ ಅಷ್ಟಾಗಿ ಬೆರೆಯುತ್ತಿರಲಿಲ್ಲ.

‘ಸಮೀಪದ ಪ್ರದೇಶಗಳಿಂದ ಜನರು ಅಲ್ಲಿಗೆ ಬರುತ್ತಿದ್ದ ಕಾರಣಕ್ಕಷ್ಟೇ ಸತ್ಯಾನಂದನ ಬಗ್ಗೆ ಸ್ಥಳೀಯರಿಗೆ ತಿಳಿದಿತ್ತು. ಈ ಘಟನೆ ಸಂಭವಿಸುವವರೆಗೆ ಜನರು ದೇವಸ್ಥಾನದ ಆಗು-ಹೋಗುಗಳಲ್ಲಿ ಅಷ್ಟಾಗಿ ಮಧ್ಯಸ್ಥಿಕೆ ವಹಿಸುತ್ತಿರಲಿಲ್ಲ ಮತ್ತು ಅರ್ಚಕನ ಬಗ್ಗೆ ತಿಳಿಯುವ ಪ್ರಯತ್ನ ಮಾಡಿರಲಿಲ್ಲ. ಆತನನ್ನು ಕೆಲವೊಮ್ಮೆ ದೇವಸ್ಥಾನದ ಅವರಣದ ಹೊರಗೆ ನೋಡಿದ್ದೇವೆ. ಆದರೂ, ಆತ ಹೊರಬಂದಿದ್ದು ತುಂಬ ವಿರಳ’ ಎಂದು ಸ್ಥಳೀಯ ನಿವಾಸಿ ನಂದು ಹೇಳಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಭಕ್ತರು, ‘ತಮಗಾಗಿ ಸತ್ಯಾನಂದ ಪೂಜೆಯ ಆಚರಣೆಗಳನ್ನು ನಡೆಸುತ್ತಿದ್ದರು. ಜನರ ನೋವು ಶಮನಕ್ಕೆ ಸಭೆ ನಡೆಸುತ್ತಿದ್ದರು’ ಎಂದಿದ್ದಾರೆ.

‘ಬಂಧಿತರಾದ ಇತರ ಇಬ್ಬರು ಆರೋಪಿಗಳು, ಗಾಯಗೊಂಡ ಸ್ಥಿತಿಯಲ್ಲಿದ್ದ ಆ ಮಹಿಳೆಗೆ ಸಹಾಯ ಮಾಡಲು ತಾವು ಪ್ರಯತ್ನಿಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ನಾನು ಅಪರಾಧ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ನಮಗೆ ಲಭ್ಯವಾದ ಆಧಾರಗಳ ಪ್ರಕಾರ ನಾವು ಇದನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಎಂದು ಪರಿಗಣಿಸಿದ್ದೇವೆ’ ಎಂದು ಬಡೌನ್ ಜಿಲ್ಲೆಯ ಎಸ್‌ಎಸ್‌ಪಿ ಸಂಕಲ್ಪ್ ಶರ್ಮಾ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಬಂಧಿತ ಇಬ್ಬರ ಹೇಳಿಕೆಯನ್ನು ಮೃತ ಮಹಿಳೆಯ ಕುಟುಂಬ ಒಪ್ಪಿಲ್ಲ. ‘ಮಹಿಳೆಗೆ ಸಹಾಯ ಮಾಡುವ ಉದ್ದೇಶವಿದ್ದಿದ್ದರೆ, ಅವರು ಗ್ರಾಮಸ್ಥರನ್ನು ಎಬ್ಬಿಸಬಹುದಿತ್ತು. ಆದರೆ ಅವರ ಉದ್ದೇಶ ಆಕೆ ಸಾಯಬೇಕು ಎಂಬುದೇ ಆಗಿತ್ತು. ದೇವರ ಭಕ್ತೆಯಾಗಿದ್ದ ಆಕೆಗೆ ದೇವಸ್ಥಾನದಲ್ಲಿ ಇಂಥದ್ದು ಸಂಭವಿಸುತ್ತದೆ ಎಂಬುದನ್ನು ನಾವು ಊಹಿಸಿರಲೂ ಇಲ್ಲ’ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಹಿಳಾ ಆಯೋಗದ ಸದಸ್ಯೆಯ ಹೇಳಿಕೆ

ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ, ‘ಸಂಜೆ ಹೊತ್ತಿನಲ್ಲಿ ಏಕಾಂಗಿಯಾಗಿ ಆ ಮಹಿಳೆ ಹೊರಬರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂಬ ಹೇಳಿಕೆ ನೀಡಿದ್ದಾರೆ.

‘ಈ ಘಟನೆ ಮಾನವೀಯತೆಗೆ ಮಾಡಿದ ಅವಮಾನ ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಮಹಿಳೆಯರು –ಯಾರದೇ ಪ್ರಭಾವಕ್ಕೆ ಒಳಗಾಗಿದ್ದರೂ-ಅಕಾಲಿಕವಾಗಿ ಮನೆಯಿಂದ ಹೊರ ಹೋಗಲೇಬಾರದು. ಮಹಿಳೆ ಸಂಜೆ ಹೊತ್ತು ಬರದಿದ್ದರೆ ಅಥವಾ ಹೊರ ಬಂದಾಗ ಜೊತೆಗೆ ಆಕೆಯ ಜೊತೆ ಒಬ್ಬ ಮಗನಾದರೂ ಇದ್ದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ’ ಎಂದು ಚಂದ್ರಮುಖಿ ದೇವಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ಆಯೋಗದ ಸದಸ್ಯೆ ಹಾಗೇಕೆ ಹೇಳಿದರು ಎಂಬುದು ನನಗೆ ಗೊತ್ತಿಲ್ಲ. ಆದರೆ ಯಾವುದೇ ಹೊತ್ತಿನಲ್ಲಿ, ಯಾವುದೇ ಸ್ಥಳಕ್ಕೆ ತನ್ನ ಇಚ್ಛಾನುಸಾರ ಹೋಗುವ ಸ್ವಾತಂತ್ರ್ಯ ಮಹಿಳೆಗಿದೆ’ ಎಂದಿದ್ದಾರೆ.


ಇದನ್ನೂ ಓದಿ: ಸೂಜಿ ತಯಾರಿಕಾ ಕಂಪೆನಿ ’ಸ್ಮಿಟ್ಝ್’ ಲಾಕೌಟ್: ನೂರಾರು ಕಾರ್ಮಿಕರು ಬೀದಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...