Homeದಲಿತ್ ಫೈಲ್ಸ್14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ.

ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಕರೆ ಸ್ವೀಕರಿಸಿದ ಬಾಲಕಿ, ಮನೆಗೆ ಬರುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ರಾತ್ರಿಯಾದರೂ ಆಕೆ ಮನೆ ತಲುಪದ ಹಿನ್ನೆಲೆ, ಮನೆಯವರು ಕರುವಕುಂಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾತ್ರಿಯಿಡೀ ಬಾಲಕಿಯ ಕುಟುಂಬಸ್ಥರು ಮತ್ತು ಸ್ಥಳೀಯರ ಜೊತೆಗೂಡಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಕುಟುಂಬಸ್ಥರ ಮಾಹಿತಿಯಂತೆ ಬಾಲಕಿಯ ಗೆಳೆಯ ಅಥವಾ ಆಕೆಯದ್ದೇ ಶಾಲೆಯಲ್ಲಿ ಕಲಿಯುವ ಪರಿಚಯಸ್ಥ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ನಡೆದಿರುವ ವಿಚಾರ ಬಯಲಾಗಿದೆ.

ಹುಡುಗ ನೀಡಿದ ಮಾಹಿತಿಯಂತೆ ವಾಣಿಯಂಬಲಂ ಬಳಿ ರೈಲ್ವೆ ಹಳಿಗಳ ಸಮೀಪ ಪೊದೆಯಲ್ಲಿ ಬಾಲಕಿಯ ಶವವನ್ನು ಶುಕ್ರವಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಾಲಾ ಸಮವಸ್ತ್ರ ಧರಿಸಿದ ರೀತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಕೈ-ಕಾಲುಗಳನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಚಪ್ಪಲಿ ಮತ್ತು ಬ್ಯಾಗ್‌ ಮೃತದೇಹದ ಸಮೀಪದಲ್ಲೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಮಿಷವೊಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಳಿಕ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರವೆಸಗಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದನ್ನು ಬಾಲಕ ಒಪ್ಪಿಕೊಂಡಿದ್ದಾನೆ. ಆತನೇ ಘಟನಾ ಸ್ಥಳವನ್ನು ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಾಲಕ ಈ ಹಿಂದೆ ಎರಡು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಒಮ್ಮೆ ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿ ಕಳಿಸಿದ್ದರು. ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದಿದ್ದ ಬಾಲಕ, ಈಗ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ಬಾಲಕಿಯ ತಂದೆ ಕರುವಕುಂಡ್ ಸಮೀಪ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಥಳೀಯ ಆಯಿಲ್‌ ಮಿಲ್‌ನಲ್ಲಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು. ಅವರಲ್ಲಿ ದೊಡ್ಡವಳು ಕೊಲೆಯಾದ ಬಾಲಕಿ.

ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ, ವಿಶೇಷವಾಗಿ ಸ್ಟೂಡೆಂಟ್‌ ಪೊಲೀಸ್ ಕ್ಯಾಡೆಟ್‌ (ಎಸ್‌ಪಿಸಿ) ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆಕೆ, ಪ್ರತಿಭಾವಂತಳಾಗಿದ್ದಳು. ಬಾಲಕ ಕೂಡ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಬಗ್ಗೆ ವರದಿಗಳಿಲ್ಲ.

ಬಾಲಕಿ ದಲಿತ ಸಮುದಾಯದವಳು ಎಂದು ಮಲಯಾಳಂನ ಪ್ರಮುಖ ಸುದ್ದಿ ಸಂಸ್ಥೆ onmanorama.com ವರದಿ ಮಾಡಿದೆ. ಮತ್ತೊಂದು ಪ್ರಮುಖ ಸುದ್ದಿ ಸಂಸ್ಥೆ keralakaumudi.com ಬಾಲಕ ಮಾದಕ ವ್ಯಸನಿಯಾಗಿದ್ದ ಎಂದು ಉಲ್ಲೇಖಿಸಿದೆ. ಈ ಕುರಿತು ಹೆಚ್ಚಿನ ಮತ್ತು ಖಚಿತ ಮಾಹಿತಿ ತಿಳಿದು ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....