Homeದಲಿತ್ ಫೈಲ್ಸ್14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ.

ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಕರೆ ಸ್ವೀಕರಿಸಿದ ಬಾಲಕಿ, ಮನೆಗೆ ಬರುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ರಾತ್ರಿಯಾದರೂ ಆಕೆ ಮನೆ ತಲುಪದ ಹಿನ್ನೆಲೆ, ಮನೆಯವರು ಕರುವಕುಂಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾತ್ರಿಯಿಡೀ ಬಾಲಕಿಯ ಕುಟುಂಬಸ್ಥರು ಮತ್ತು ಸ್ಥಳೀಯರ ಜೊತೆಗೂಡಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಕುಟುಂಬಸ್ಥರ ಮಾಹಿತಿಯಂತೆ ಬಾಲಕಿಯ ಗೆಳೆಯ ಅಥವಾ ಆಕೆಯದ್ದೇ ಶಾಲೆಯಲ್ಲಿ ಕಲಿಯುವ ಪರಿಚಯಸ್ಥ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ನಡೆದಿರುವ ವಿಚಾರ ಬಯಲಾಗಿದೆ.

ಹುಡುಗ ನೀಡಿದ ಮಾಹಿತಿಯಂತೆ ವಾಣಿಯಂಬಲಂ ಬಳಿ ರೈಲ್ವೆ ಹಳಿಗಳ ಸಮೀಪ ಪೊದೆಯಲ್ಲಿ ಬಾಲಕಿಯ ಶವವನ್ನು ಶುಕ್ರವಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಾಲಾ ಸಮವಸ್ತ್ರ ಧರಿಸಿದ ರೀತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಕೈ-ಕಾಲುಗಳನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಚಪ್ಪಲಿ ಮತ್ತು ಬ್ಯಾಗ್‌ ಮೃತದೇಹದ ಸಮೀಪದಲ್ಲೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಮಿಷವೊಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಳಿಕ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರವೆಸಗಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದನ್ನು ಬಾಲಕ ಒಪ್ಪಿಕೊಂಡಿದ್ದಾನೆ. ಆತನೇ ಘಟನಾ ಸ್ಥಳವನ್ನು ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಾಲಕ ಈ ಹಿಂದೆ ಎರಡು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಒಮ್ಮೆ ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿ ಕಳಿಸಿದ್ದರು. ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದಿದ್ದ ಬಾಲಕ, ಈಗ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ಬಾಲಕಿಯ ತಂದೆ ಕರುವಕುಂಡ್ ಸಮೀಪ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಥಳೀಯ ಆಯಿಲ್‌ ಮಿಲ್‌ನಲ್ಲಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು. ಅವರಲ್ಲಿ ದೊಡ್ಡವಳು ಕೊಲೆಯಾದ ಬಾಲಕಿ.

ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ, ವಿಶೇಷವಾಗಿ ಸ್ಟೂಡೆಂಟ್‌ ಪೊಲೀಸ್ ಕ್ಯಾಡೆಟ್‌ (ಎಸ್‌ಪಿಸಿ) ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆಕೆ, ಪ್ರತಿಭಾವಂತಳಾಗಿದ್ದಳು. ಬಾಲಕ ಕೂಡ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಬಗ್ಗೆ ವರದಿಗಳಿಲ್ಲ.

ಬಾಲಕಿ ದಲಿತ ಸಮುದಾಯದವಳು ಎಂದು ಮಲಯಾಳಂನ ಪ್ರಮುಖ ಸುದ್ದಿ ಸಂಸ್ಥೆ onmanorama.com ವರದಿ ಮಾಡಿದೆ. ಮತ್ತೊಂದು ಪ್ರಮುಖ ಸುದ್ದಿ ಸಂಸ್ಥೆ keralakaumudi.com ಬಾಲಕ ಮಾದಕ ವ್ಯಸನಿಯಾಗಿದ್ದ ಎಂದು ಉಲ್ಲೇಖಿಸಿದೆ. ಈ ಕುರಿತು ಹೆಚ್ಚಿನ ಮತ್ತು ಖಚಿತ ಮಾಹಿತಿ ತಿಳಿದು ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...