Homeಕರ್ನಾಟಕಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

ಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

- Advertisement -
- Advertisement -

ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಮರಣದಂಡನೆ ಹಾಗೂ 1.20 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯ ಜಯ್‌ ಸಿಂಗ್ (21), ಮುಕೇಶ್ ಸಿಂಗ್ (20) ಮತ್ತು ಜಾರ್ಖಂಡ್‌ನ ರಾಂಚಿಯ ಮನೀಷ್ ತಿರ್ಕಿ (33) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ : ಮಂಗಳೂರು ನಗರದ ಹೊರವಲಯ ಉಳಾಯಿಬೆಟ್ಟು ಬಳಿಯ ತಿರುವೈಲು ಗ್ರಾಮದ ಪರಾರಿಯಲ್ಲಿರುವ ರಾಜ್‌ ಟೈಲ್ಸ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಕುಟುಂಬದ ಎಂಟು ವರ್ಷದ ಹೆಣ್ಣು ಮಗಳು 2021ರ ನವೆಂಬರ್ 20ರಂದು ಸಂಜೆ ಕಾಣೆಯಾಗಿದ್ದಳು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾಲಕಿಯ ಪೋಷಕರು ಮತ್ತು ಊರಿನವರು ಬಾಲಕಿಗಾಗಿ ಹುಡುಕಾಟ ನಡೆಸಿದಾಗ, ನಾಪತ್ತೆಯಾದ ದಿನವೇ ರಾತ್ರಿ ಫ್ಯಾಕ್ಟರಿಯ ಹಿಂಭಾಗದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯನ್ನು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದವರೇ ಅತ್ಯಾಚಾರಗೈದು ಕೊಲೆ ಮಾಡಿದ್ದ ಅನುಮಾನ ವ್ಯಕ್ತವಾದ ಹಿನ್ನೆಲೆ, ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಈ ಸಂದರ್ಭದಲ್ಲೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಯ್‌ ಸಿಂಗ್, ಮುಕೇಶ್ ಸಿಂಗ್, ಮನೀಷ್ ತಿರ್ಕೆ ಮತ್ತು ಮುನೀಮ್ ಸಿಂಗ್ ನಾಪತ್ತೆಯಾಗಿದ್ದರು.

ಹಾಗಾಗಿ, ಇವರೇ ಕೃತ್ಯವೆಸಗಿರುವುದು ಪೊಲೀಸರಿಗೆ ಖಚಿತವಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದರು. ವಿಚಾರಣೆ ವೇಳೆ ಈಗ ಶಿಕ್ಷೆಗೊಳಗಾದ ಮೂವರು ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದರೆ, ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಅವರಿಗೆ ಸಹಕಾರ ನೀಡಿರುವುದು ಬಯಲಾಗಿತ್ತು.

ಫ್ಯಾಕ್ಟರಿಗೆ ರಜೆ ಇದ್ದ ದಿನ (2021 ನವೆಂಬರ್ 21) ಅಲ್ಲಿಯೇ ಆಟವಾಡಿಕೊಂಡಿದ್ದ ಬಾಲಕಿಯನ್ನು ಸಿಹಿ ತಿನಿಸು ನೀಡಿ, ಸಿಸಿಟಿವಿ ಕ್ಯಾಮರಾ ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದ ಅಪರಾಧಿಗಳು, ಅಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ವೇಳೆ ಬಾಲಕಿ ನೋವಿನಿಂದ ಕೂಗಿಕೊಂಡಿದ್ದಕ್ಕೆ ಜಯ್ ಸಿಂಗ್ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಪ್ರಕರಣದ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಠಾಣೆಯ ಆಗಿನ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿದಾರರ ವಿಚಾರಣೆ, 74 ದಾಖಲೆಗಳನ್ನು ಪರಿಶೀಲನೆ ನಡೆಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್ ಅವರು, ಗುರುವಾರ (ನವೆಂಬರ್ 7, 2024) ಮೂವರು ಅಪರಾಧಿಗಳಿಗೆ ಮರಣದಂಡನೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ.

ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪ್ರಕರಣದ ವಿಚಾರಣೆ ವೇಳೆ, ಜಾಮೀನಿನಲ್ಲಿ ಹೊರಬಂದು ತಲೆಮರೆಸಿಕೊಂಡಿದ್ದಾನೆ. ಹಾಗಾಗಿ, ಆತನಿಗೆ ಇನ್ನೂ ಶಿಕ್ಷೆ ವಿಧಿಸಿಲ್ಲ.

ಅಪರಾಧಿಗಳಿಂದ ಸಂಗ್ರಹಿಸಿದ ದಂಡದ ಮೊತ್ತ 1.20 ಲಕ್ಷ ರೂ. ಮೃತ ಬಾಲಕಿಯ ಪೋಷಕರಿಗೆ ಪಾವತಿಸುವಂತೆ ಹಾಗೂ ಸಂತ್ರಸ್ತರ ಪರಿಹಾರ ಯೋಜನೆಯಡಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಯ ಪೋಷಕರಿಗೆ 3.80 ಲಕ್ಷ ರೂ. ಹೆಚ್ಚುವರಿಯಾಗಿ ನೀಡುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಮಂಗಳೂರಿನ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ ಪ್ರಥಮ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...