Homeಕರ್ನಾಟಕಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

ಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

- Advertisement -
- Advertisement -

ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಮರಣದಂಡನೆ ಹಾಗೂ 1.20 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯ ಜಯ್‌ ಸಿಂಗ್ (21), ಮುಕೇಶ್ ಸಿಂಗ್ (20) ಮತ್ತು ಜಾರ್ಖಂಡ್‌ನ ರಾಂಚಿಯ ಮನೀಷ್ ತಿರ್ಕಿ (33) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ : ಮಂಗಳೂರು ನಗರದ ಹೊರವಲಯ ಉಳಾಯಿಬೆಟ್ಟು ಬಳಿಯ ತಿರುವೈಲು ಗ್ರಾಮದ ಪರಾರಿಯಲ್ಲಿರುವ ರಾಜ್‌ ಟೈಲ್ಸ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಕುಟುಂಬದ ಎಂಟು ವರ್ಷದ ಹೆಣ್ಣು ಮಗಳು 2021ರ ನವೆಂಬರ್ 20ರಂದು ಸಂಜೆ ಕಾಣೆಯಾಗಿದ್ದಳು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾಲಕಿಯ ಪೋಷಕರು ಮತ್ತು ಊರಿನವರು ಬಾಲಕಿಗಾಗಿ ಹುಡುಕಾಟ ನಡೆಸಿದಾಗ, ನಾಪತ್ತೆಯಾದ ದಿನವೇ ರಾತ್ರಿ ಫ್ಯಾಕ್ಟರಿಯ ಹಿಂಭಾಗದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯನ್ನು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದವರೇ ಅತ್ಯಾಚಾರಗೈದು ಕೊಲೆ ಮಾಡಿದ್ದ ಅನುಮಾನ ವ್ಯಕ್ತವಾದ ಹಿನ್ನೆಲೆ, ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಈ ಸಂದರ್ಭದಲ್ಲೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಯ್‌ ಸಿಂಗ್, ಮುಕೇಶ್ ಸಿಂಗ್, ಮನೀಷ್ ತಿರ್ಕೆ ಮತ್ತು ಮುನೀಮ್ ಸಿಂಗ್ ನಾಪತ್ತೆಯಾಗಿದ್ದರು.

ಹಾಗಾಗಿ, ಇವರೇ ಕೃತ್ಯವೆಸಗಿರುವುದು ಪೊಲೀಸರಿಗೆ ಖಚಿತವಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದರು. ವಿಚಾರಣೆ ವೇಳೆ ಈಗ ಶಿಕ್ಷೆಗೊಳಗಾದ ಮೂವರು ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದರೆ, ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಅವರಿಗೆ ಸಹಕಾರ ನೀಡಿರುವುದು ಬಯಲಾಗಿತ್ತು.

ಫ್ಯಾಕ್ಟರಿಗೆ ರಜೆ ಇದ್ದ ದಿನ (2021 ನವೆಂಬರ್ 21) ಅಲ್ಲಿಯೇ ಆಟವಾಡಿಕೊಂಡಿದ್ದ ಬಾಲಕಿಯನ್ನು ಸಿಹಿ ತಿನಿಸು ನೀಡಿ, ಸಿಸಿಟಿವಿ ಕ್ಯಾಮರಾ ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದ ಅಪರಾಧಿಗಳು, ಅಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ವೇಳೆ ಬಾಲಕಿ ನೋವಿನಿಂದ ಕೂಗಿಕೊಂಡಿದ್ದಕ್ಕೆ ಜಯ್ ಸಿಂಗ್ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಪ್ರಕರಣದ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಠಾಣೆಯ ಆಗಿನ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿದಾರರ ವಿಚಾರಣೆ, 74 ದಾಖಲೆಗಳನ್ನು ಪರಿಶೀಲನೆ ನಡೆಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್ ಅವರು, ಗುರುವಾರ (ನವೆಂಬರ್ 7, 2024) ಮೂವರು ಅಪರಾಧಿಗಳಿಗೆ ಮರಣದಂಡನೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ.

ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪ್ರಕರಣದ ವಿಚಾರಣೆ ವೇಳೆ, ಜಾಮೀನಿನಲ್ಲಿ ಹೊರಬಂದು ತಲೆಮರೆಸಿಕೊಂಡಿದ್ದಾನೆ. ಹಾಗಾಗಿ, ಆತನಿಗೆ ಇನ್ನೂ ಶಿಕ್ಷೆ ವಿಧಿಸಿಲ್ಲ.

ಅಪರಾಧಿಗಳಿಂದ ಸಂಗ್ರಹಿಸಿದ ದಂಡದ ಮೊತ್ತ 1.20 ಲಕ್ಷ ರೂ. ಮೃತ ಬಾಲಕಿಯ ಪೋಷಕರಿಗೆ ಪಾವತಿಸುವಂತೆ ಹಾಗೂ ಸಂತ್ರಸ್ತರ ಪರಿಹಾರ ಯೋಜನೆಯಡಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಯ ಪೋಷಕರಿಗೆ 3.80 ಲಕ್ಷ ರೂ. ಹೆಚ್ಚುವರಿಯಾಗಿ ನೀಡುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಮಂಗಳೂರಿನ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ ಪ್ರಥಮ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...