Homeಚಳವಳಿದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಲ್ಲಿನ ಪೊಲೀಸರು ಮತ್ತು ಯೋಗಿ ಆದಿತ್ಯನಾಥ್ ಸರ್ಕಾರ ನಡೆದುಕೊಂಡ ರೀತಿ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿಯೂ ಸಹ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಸರಣಿ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರಿನಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ.(ಎ.ಐ.ಡಿ.ಡಬ್ಲು,ಓ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ), ದಲಿತ ಹಕ್ಕುಗಳ ಸಮಿತಿ (ಡಿ.ಎಚ್.ಎಸ್) ಅಖಿಲ ಭಾರತ ವಕೀಲರ ಸಂಘ (ಎ.ಐ.ಎಲ್.ಯು), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌.ಯು.ಸಿ.ಐ) ಸಂಘಟನೆಗಳು ಪ್ರತಿಭಟನೆ ನಡೆಸಿ ಹೆಣ್ಣುಮಕ್ಕಳ ರಕ್ಷಣೆಗೆ ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿವೆ.

ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಮಾತನಾಡಿ “ದೇಶದ ಜನಮಾನಸವನ್ನು ಛಿದ್ರಗೊಳಿಸುವ ಹೃದಯವಿದ್ರಾವಕ ಘಟನೆಗಳು ಉತ್ತರ ಪ್ರದೇಶದದಲ್ಲಿ ನಡೆಯುತ್ತಿವೆ. ಬರ್ಭರ ಹಿಂಸಾತ್ಮಕ ಅತ್ಯಾಚಾರ ಘಟನೆಗಳಿಗೆ ಅಲ್ಲಿನ ಸರ್ಕಾರವೇ ನೇರ ಹೊಣೆಯಾಗಿದೆ. ಆರೋಪಿಗಳಿಗೆ ರಕ್ಷಣೆ ನೀಡುವ ಸರ್ಕಾರದ ಧೋರಣೆಗಳನ್ನು ನಾವು ಖಂಡಿಸುತ್ತವೆ” ಎಂದರು.

ಪ್ರತಿಭಟನೆಯ ಲೈವ್ ನೋಡಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ

Posted by Naanu Gauri on Wednesday, September 30, 2020

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ಮೇಲೆ ಬರ್ಭರ ಹಿಂಸೆಯನ್ನೆಸಗಿ ಮಾರಣಾಂತಿಕವಾಗಿ ಗಾಯಗೊಳಿಸಲಾಗಿತ್ತು. ಸೆಪ್ಟೆಂಬರ್ 14 ರಿಂದ 29ರ ವರೆಗೆ ಸಾವು ಬದುಕುಗಳ ನಡುವೆ ಹೋರಾಟ ನಡೆಸಿದ ಯುವತಿ ಕೊನೆಗೂ ಸಾವನ್ನಪ್ಪಿದ್ದಾಳೆ. ಜೀವ ಇದ್ದಾಗಲೂ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಇಲಾಖೆ ಸಾವಿನಲ್ಲಿಯೂ ಆಕೆಗೆ ಘನತೆಯ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡದೆ ಕುಟುಂಬದವರನ್ನು ಕೂಡಿಟ್ಟು ಬಲವಂತವಾಗಿ ತಾವೇ ಬೆಳಗಿನ ಜಾವದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌.ಯು.ಸಿ.ಐ ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಶ್ರಿರಾಮ್ ಮಾತನಾಡಿ, “ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ. ಉನ್ನಾವೋ ಅತ್ಯಾಚಾರ ಘಟನೆಯಲ್ಲಿ ಆರೋಪಿ ಕುಲದೀಪ್‌ ಸಿಂಗ್ ಸೆಂಗರ್‌ನನ್ನು ರಕ್ಷಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಅದರ ತನಿಖೆ ನಡೆಸಿದ ಸಿ.ಬಿ.ಐ ಸ್ಥಳೀಯವಾಗಿ ಇಬ್ಬರು ಐ.ಪಿ.ಎಸ್ ಮತ್ತು ಒಬ್ಬರು ಐ.ಪಿ.ಎಸ್ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿ, ಕ್ರಮಕ್ಕೆ ಸೂಚನೆ ನೀಡಿದ್ದರೂ ಅವರ ಮೇಲೆ ಯೋಗಿ ಸರಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದು ಅಲ್ಲಿ ಅತ್ಯಾಚಾರ ದೌರ್ಜನ್ಯಗಳನ್ನು ಎಸಗುವವರಿಗೆ ರಾಜಾರೋಷವಾಗಿ ಅನುಮತಿ ಕೊಟ್ಟಂತಾಗಿದೆ” ಎಂದು ಟೀಕಿಸಿದರು.

ಇಂದು ನಾವು ಅತ್ಯಾಚಾರ ಘಟನೆಗಳ ವಿರುದ್ಧ ಪ್ರತಿಭಟಿಸುತ್ತಿರುವಾಗಲೇ ಉತ್ತರ ಪ್ರದೇಶದ ಬಲರಾಂಪುರ ಮತ್ತು ಅರಮ್ ಘರ್ ಗಳಲ್ಲಿ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ನಡೆದ ಸುದ್ದಿಗಳು ಬರುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ನಿಯಮಗಳು ಮನುಧರ್ಮ ಶಾಸ್ತ್ರದ ಶ್ರೇಣೀಕೃತ ಜಾತಿ ವ್ಯವಸ್ಥೆಯ ಭಾಗವಾಗಿ ನಡೆಯುತ್ತಿದೆ ಎಂಬುದು ಇದರಿಂದ ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಕಿಡಿಕಾರಿದರು.

ಹಕ್ಕೊತ್ತಾಯಗಳು

  • ಅತ್ಯಾಚಾರದ ಸಂತ್ರಸ್ಥೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು.
  • ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಅಪರಾತ್ರಿಯಲ್ಲಿ ತಾವೇ ಚಿತೆಗೆ ಬೆಂಕಿ ಇಟ್ಟ ಪೊಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.
  • ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೇ ಕಾನೂನಿಗೆ ಅಪಚಾರ ಮಾಡಿದ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.
  • ದೇಶಾದ್ಯಂತ ಹೆಣ್ಣಮಕ್ಕಳಿಗೆ ರಕ್ಷಣೆ ನೀಡುವಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

ಕರ್ನಾಟಕದ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಹೊಳಲು ಗ್ರಾಮದಲ್ಲಿ ದಿನಾಂಕ 6-9-2020 ರಂದು
ಮಹಿಳೆಯೊಬ್ಬರ ಮೇಲೆ ಬಲಾತ್ಕಾರ ಮತ್ತು ಕೊಲೆ ಪ್ರಯತ್ನ ನಡೆದಿದೆ ಎಂಬ ವರದಿಗಳಿವೆ. ಕರ್ನಾಟಕ ಸರಕಾರವು ಈ ಕೂಡಲೇ ಕಾರ್ಯಪ್ರವೃತ್ತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ, ಡಿಎಸ್ಎಸ್ ಮುಖಂಡ ಮೋಹನ್ ರಾಜ್, ದಲಿತ ಹಕ್ಕುಗಳ ಸಮಿತಿಯ ನಾಗಣ್ಣ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ್ ರೆಡ್ಡಿ, ಆರ್ ಇಂಡಿಯಾ ಲಾಯರ್ಸ್ ಯುನಿಯನ್ ರಾಜ್ಯ ಸಮಿತಿ ಸದಸ್ಯ ಶರಣ ಬಸಪ್ಪ ಮರದ್, ಎಐಎಂಎಂಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಮುಂತಾದವರು ಭಾಗವಹಿಸಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಯೂ ಉತ್ತರ ಪ್ರದೇಶದ ಅತ್ಯಚಾರ ಘಟನೆ ಖಂಡಿಸಿ, ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.

ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಪ್ರತಿಭಟನೆ

Posted by ಅಬ್ದುಲ್ ಸಮದ್ ಚೌದ್ರಿ on Wednesday, September 30, 2020


ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...