Homeಚಳವಳಿದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಲ್ಲಿನ ಪೊಲೀಸರು ಮತ್ತು ಯೋಗಿ ಆದಿತ್ಯನಾಥ್ ಸರ್ಕಾರ ನಡೆದುಕೊಂಡ ರೀತಿ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿಯೂ ಸಹ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಸರಣಿ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರಿನಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ.(ಎ.ಐ.ಡಿ.ಡಬ್ಲು,ಓ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ), ದಲಿತ ಹಕ್ಕುಗಳ ಸಮಿತಿ (ಡಿ.ಎಚ್.ಎಸ್) ಅಖಿಲ ಭಾರತ ವಕೀಲರ ಸಂಘ (ಎ.ಐ.ಎಲ್.ಯು), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌.ಯು.ಸಿ.ಐ) ಸಂಘಟನೆಗಳು ಪ್ರತಿಭಟನೆ ನಡೆಸಿ ಹೆಣ್ಣುಮಕ್ಕಳ ರಕ್ಷಣೆಗೆ ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿವೆ.

ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಮಾತನಾಡಿ “ದೇಶದ ಜನಮಾನಸವನ್ನು ಛಿದ್ರಗೊಳಿಸುವ ಹೃದಯವಿದ್ರಾವಕ ಘಟನೆಗಳು ಉತ್ತರ ಪ್ರದೇಶದದಲ್ಲಿ ನಡೆಯುತ್ತಿವೆ. ಬರ್ಭರ ಹಿಂಸಾತ್ಮಕ ಅತ್ಯಾಚಾರ ಘಟನೆಗಳಿಗೆ ಅಲ್ಲಿನ ಸರ್ಕಾರವೇ ನೇರ ಹೊಣೆಯಾಗಿದೆ. ಆರೋಪಿಗಳಿಗೆ ರಕ್ಷಣೆ ನೀಡುವ ಸರ್ಕಾರದ ಧೋರಣೆಗಳನ್ನು ನಾವು ಖಂಡಿಸುತ್ತವೆ” ಎಂದರು.

ಪ್ರತಿಭಟನೆಯ ಲೈವ್ ನೋಡಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ

Posted by Naanu Gauri on Wednesday, September 30, 2020

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ಮೇಲೆ ಬರ್ಭರ ಹಿಂಸೆಯನ್ನೆಸಗಿ ಮಾರಣಾಂತಿಕವಾಗಿ ಗಾಯಗೊಳಿಸಲಾಗಿತ್ತು. ಸೆಪ್ಟೆಂಬರ್ 14 ರಿಂದ 29ರ ವರೆಗೆ ಸಾವು ಬದುಕುಗಳ ನಡುವೆ ಹೋರಾಟ ನಡೆಸಿದ ಯುವತಿ ಕೊನೆಗೂ ಸಾವನ್ನಪ್ಪಿದ್ದಾಳೆ. ಜೀವ ಇದ್ದಾಗಲೂ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಇಲಾಖೆ ಸಾವಿನಲ್ಲಿಯೂ ಆಕೆಗೆ ಘನತೆಯ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡದೆ ಕುಟುಂಬದವರನ್ನು ಕೂಡಿಟ್ಟು ಬಲವಂತವಾಗಿ ತಾವೇ ಬೆಳಗಿನ ಜಾವದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌.ಯು.ಸಿ.ಐ ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಶ್ರಿರಾಮ್ ಮಾತನಾಡಿ, “ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ. ಉನ್ನಾವೋ ಅತ್ಯಾಚಾರ ಘಟನೆಯಲ್ಲಿ ಆರೋಪಿ ಕುಲದೀಪ್‌ ಸಿಂಗ್ ಸೆಂಗರ್‌ನನ್ನು ರಕ್ಷಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಅದರ ತನಿಖೆ ನಡೆಸಿದ ಸಿ.ಬಿ.ಐ ಸ್ಥಳೀಯವಾಗಿ ಇಬ್ಬರು ಐ.ಪಿ.ಎಸ್ ಮತ್ತು ಒಬ್ಬರು ಐ.ಪಿ.ಎಸ್ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿ, ಕ್ರಮಕ್ಕೆ ಸೂಚನೆ ನೀಡಿದ್ದರೂ ಅವರ ಮೇಲೆ ಯೋಗಿ ಸರಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದು ಅಲ್ಲಿ ಅತ್ಯಾಚಾರ ದೌರ್ಜನ್ಯಗಳನ್ನು ಎಸಗುವವರಿಗೆ ರಾಜಾರೋಷವಾಗಿ ಅನುಮತಿ ಕೊಟ್ಟಂತಾಗಿದೆ” ಎಂದು ಟೀಕಿಸಿದರು.

ಇಂದು ನಾವು ಅತ್ಯಾಚಾರ ಘಟನೆಗಳ ವಿರುದ್ಧ ಪ್ರತಿಭಟಿಸುತ್ತಿರುವಾಗಲೇ ಉತ್ತರ ಪ್ರದೇಶದ ಬಲರಾಂಪುರ ಮತ್ತು ಅರಮ್ ಘರ್ ಗಳಲ್ಲಿ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ನಡೆದ ಸುದ್ದಿಗಳು ಬರುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ನಿಯಮಗಳು ಮನುಧರ್ಮ ಶಾಸ್ತ್ರದ ಶ್ರೇಣೀಕೃತ ಜಾತಿ ವ್ಯವಸ್ಥೆಯ ಭಾಗವಾಗಿ ನಡೆಯುತ್ತಿದೆ ಎಂಬುದು ಇದರಿಂದ ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಕಿಡಿಕಾರಿದರು.

ಹಕ್ಕೊತ್ತಾಯಗಳು

  • ಅತ್ಯಾಚಾರದ ಸಂತ್ರಸ್ಥೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು.
  • ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಅಪರಾತ್ರಿಯಲ್ಲಿ ತಾವೇ ಚಿತೆಗೆ ಬೆಂಕಿ ಇಟ್ಟ ಪೊಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.
  • ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೇ ಕಾನೂನಿಗೆ ಅಪಚಾರ ಮಾಡಿದ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.
  • ದೇಶಾದ್ಯಂತ ಹೆಣ್ಣಮಕ್ಕಳಿಗೆ ರಕ್ಷಣೆ ನೀಡುವಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

ಕರ್ನಾಟಕದ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಹೊಳಲು ಗ್ರಾಮದಲ್ಲಿ ದಿನಾಂಕ 6-9-2020 ರಂದು
ಮಹಿಳೆಯೊಬ್ಬರ ಮೇಲೆ ಬಲಾತ್ಕಾರ ಮತ್ತು ಕೊಲೆ ಪ್ರಯತ್ನ ನಡೆದಿದೆ ಎಂಬ ವರದಿಗಳಿವೆ. ಕರ್ನಾಟಕ ಸರಕಾರವು ಈ ಕೂಡಲೇ ಕಾರ್ಯಪ್ರವೃತ್ತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ, ಡಿಎಸ್ಎಸ್ ಮುಖಂಡ ಮೋಹನ್ ರಾಜ್, ದಲಿತ ಹಕ್ಕುಗಳ ಸಮಿತಿಯ ನಾಗಣ್ಣ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ್ ರೆಡ್ಡಿ, ಆರ್ ಇಂಡಿಯಾ ಲಾಯರ್ಸ್ ಯುನಿಯನ್ ರಾಜ್ಯ ಸಮಿತಿ ಸದಸ್ಯ ಶರಣ ಬಸಪ್ಪ ಮರದ್, ಎಐಎಂಎಂಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಮುಂತಾದವರು ಭಾಗವಹಿಸಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಯೂ ಉತ್ತರ ಪ್ರದೇಶದ ಅತ್ಯಚಾರ ಘಟನೆ ಖಂಡಿಸಿ, ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.

ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಪ್ರತಿಭಟನೆ

Posted by ಅಬ್ದುಲ್ ಸಮದ್ ಚೌದ್ರಿ on Wednesday, September 30, 2020


ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....