Homeಚಳವಳಿದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಲ್ಲಿನ ಪೊಲೀಸರು ಮತ್ತು ಯೋಗಿ ಆದಿತ್ಯನಾಥ್ ಸರ್ಕಾರ ನಡೆದುಕೊಂಡ ರೀತಿ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿಯೂ ಸಹ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಸರಣಿ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರಿನಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ.(ಎ.ಐ.ಡಿ.ಡಬ್ಲು,ಓ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ), ದಲಿತ ಹಕ್ಕುಗಳ ಸಮಿತಿ (ಡಿ.ಎಚ್.ಎಸ್) ಅಖಿಲ ಭಾರತ ವಕೀಲರ ಸಂಘ (ಎ.ಐ.ಎಲ್.ಯು), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌.ಯು.ಸಿ.ಐ) ಸಂಘಟನೆಗಳು ಪ್ರತಿಭಟನೆ ನಡೆಸಿ ಹೆಣ್ಣುಮಕ್ಕಳ ರಕ್ಷಣೆಗೆ ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿವೆ.

ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಮಾತನಾಡಿ “ದೇಶದ ಜನಮಾನಸವನ್ನು ಛಿದ್ರಗೊಳಿಸುವ ಹೃದಯವಿದ್ರಾವಕ ಘಟನೆಗಳು ಉತ್ತರ ಪ್ರದೇಶದದಲ್ಲಿ ನಡೆಯುತ್ತಿವೆ. ಬರ್ಭರ ಹಿಂಸಾತ್ಮಕ ಅತ್ಯಾಚಾರ ಘಟನೆಗಳಿಗೆ ಅಲ್ಲಿನ ಸರ್ಕಾರವೇ ನೇರ ಹೊಣೆಯಾಗಿದೆ. ಆರೋಪಿಗಳಿಗೆ ರಕ್ಷಣೆ ನೀಡುವ ಸರ್ಕಾರದ ಧೋರಣೆಗಳನ್ನು ನಾವು ಖಂಡಿಸುತ್ತವೆ” ಎಂದರು.

ಪ್ರತಿಭಟನೆಯ ಲೈವ್ ನೋಡಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ

Posted by Naanu Gauri on Wednesday, September 30, 2020

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ಮೇಲೆ ಬರ್ಭರ ಹಿಂಸೆಯನ್ನೆಸಗಿ ಮಾರಣಾಂತಿಕವಾಗಿ ಗಾಯಗೊಳಿಸಲಾಗಿತ್ತು. ಸೆಪ್ಟೆಂಬರ್ 14 ರಿಂದ 29ರ ವರೆಗೆ ಸಾವು ಬದುಕುಗಳ ನಡುವೆ ಹೋರಾಟ ನಡೆಸಿದ ಯುವತಿ ಕೊನೆಗೂ ಸಾವನ್ನಪ್ಪಿದ್ದಾಳೆ. ಜೀವ ಇದ್ದಾಗಲೂ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಇಲಾಖೆ ಸಾವಿನಲ್ಲಿಯೂ ಆಕೆಗೆ ಘನತೆಯ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡದೆ ಕುಟುಂಬದವರನ್ನು ಕೂಡಿಟ್ಟು ಬಲವಂತವಾಗಿ ತಾವೇ ಬೆಳಗಿನ ಜಾವದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌.ಯು.ಸಿ.ಐ ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಶ್ರಿರಾಮ್ ಮಾತನಾಡಿ, “ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ. ಉನ್ನಾವೋ ಅತ್ಯಾಚಾರ ಘಟನೆಯಲ್ಲಿ ಆರೋಪಿ ಕುಲದೀಪ್‌ ಸಿಂಗ್ ಸೆಂಗರ್‌ನನ್ನು ರಕ್ಷಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಅದರ ತನಿಖೆ ನಡೆಸಿದ ಸಿ.ಬಿ.ಐ ಸ್ಥಳೀಯವಾಗಿ ಇಬ್ಬರು ಐ.ಪಿ.ಎಸ್ ಮತ್ತು ಒಬ್ಬರು ಐ.ಪಿ.ಎಸ್ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿ, ಕ್ರಮಕ್ಕೆ ಸೂಚನೆ ನೀಡಿದ್ದರೂ ಅವರ ಮೇಲೆ ಯೋಗಿ ಸರಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದು ಅಲ್ಲಿ ಅತ್ಯಾಚಾರ ದೌರ್ಜನ್ಯಗಳನ್ನು ಎಸಗುವವರಿಗೆ ರಾಜಾರೋಷವಾಗಿ ಅನುಮತಿ ಕೊಟ್ಟಂತಾಗಿದೆ” ಎಂದು ಟೀಕಿಸಿದರು.

ಇಂದು ನಾವು ಅತ್ಯಾಚಾರ ಘಟನೆಗಳ ವಿರುದ್ಧ ಪ್ರತಿಭಟಿಸುತ್ತಿರುವಾಗಲೇ ಉತ್ತರ ಪ್ರದೇಶದ ಬಲರಾಂಪುರ ಮತ್ತು ಅರಮ್ ಘರ್ ಗಳಲ್ಲಿ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ನಡೆದ ಸುದ್ದಿಗಳು ಬರುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ನಿಯಮಗಳು ಮನುಧರ್ಮ ಶಾಸ್ತ್ರದ ಶ್ರೇಣೀಕೃತ ಜಾತಿ ವ್ಯವಸ್ಥೆಯ ಭಾಗವಾಗಿ ನಡೆಯುತ್ತಿದೆ ಎಂಬುದು ಇದರಿಂದ ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಕಿಡಿಕಾರಿದರು.

ಹಕ್ಕೊತ್ತಾಯಗಳು

  • ಅತ್ಯಾಚಾರದ ಸಂತ್ರಸ್ಥೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು.
  • ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಅಪರಾತ್ರಿಯಲ್ಲಿ ತಾವೇ ಚಿತೆಗೆ ಬೆಂಕಿ ಇಟ್ಟ ಪೊಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.
  • ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೇ ಕಾನೂನಿಗೆ ಅಪಚಾರ ಮಾಡಿದ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.
  • ದೇಶಾದ್ಯಂತ ಹೆಣ್ಣಮಕ್ಕಳಿಗೆ ರಕ್ಷಣೆ ನೀಡುವಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

ಕರ್ನಾಟಕದ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಹೊಳಲು ಗ್ರಾಮದಲ್ಲಿ ದಿನಾಂಕ 6-9-2020 ರಂದು
ಮಹಿಳೆಯೊಬ್ಬರ ಮೇಲೆ ಬಲಾತ್ಕಾರ ಮತ್ತು ಕೊಲೆ ಪ್ರಯತ್ನ ನಡೆದಿದೆ ಎಂಬ ವರದಿಗಳಿವೆ. ಕರ್ನಾಟಕ ಸರಕಾರವು ಈ ಕೂಡಲೇ ಕಾರ್ಯಪ್ರವೃತ್ತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ, ಡಿಎಸ್ಎಸ್ ಮುಖಂಡ ಮೋಹನ್ ರಾಜ್, ದಲಿತ ಹಕ್ಕುಗಳ ಸಮಿತಿಯ ನಾಗಣ್ಣ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ್ ರೆಡ್ಡಿ, ಆರ್ ಇಂಡಿಯಾ ಲಾಯರ್ಸ್ ಯುನಿಯನ್ ರಾಜ್ಯ ಸಮಿತಿ ಸದಸ್ಯ ಶರಣ ಬಸಪ್ಪ ಮರದ್, ಎಐಎಂಎಂಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಮುಂತಾದವರು ಭಾಗವಹಿಸಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಯೂ ಉತ್ತರ ಪ್ರದೇಶದ ಅತ್ಯಚಾರ ಘಟನೆ ಖಂಡಿಸಿ, ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.

ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಪ್ರತಿಭಟನೆ

Posted by ಅಬ್ದುಲ್ ಸಮದ್ ಚೌದ್ರಿ on Wednesday, September 30, 2020


ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...