Homeಚಳವಳಿದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಲ್ಲಿನ ಪೊಲೀಸರು ಮತ್ತು ಯೋಗಿ ಆದಿತ್ಯನಾಥ್ ಸರ್ಕಾರ ನಡೆದುಕೊಂಡ ರೀತಿ ಖಂಡಿಸಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿಯೂ ಸಹ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಸರಣಿ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರಿನಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ.(ಎ.ಐ.ಡಿ.ಡಬ್ಲು,ಓ), ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ), ದಲಿತ ಹಕ್ಕುಗಳ ಸಮಿತಿ (ಡಿ.ಎಚ್.ಎಸ್) ಅಖಿಲ ಭಾರತ ವಕೀಲರ ಸಂಘ (ಎ.ಐ.ಎಲ್.ಯು), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌.ಯು.ಸಿ.ಐ) ಸಂಘಟನೆಗಳು ಪ್ರತಿಭಟನೆ ನಡೆಸಿ ಹೆಣ್ಣುಮಕ್ಕಳ ರಕ್ಷಣೆಗೆ ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿವೆ.

ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಮಾತನಾಡಿ “ದೇಶದ ಜನಮಾನಸವನ್ನು ಛಿದ್ರಗೊಳಿಸುವ ಹೃದಯವಿದ್ರಾವಕ ಘಟನೆಗಳು ಉತ್ತರ ಪ್ರದೇಶದದಲ್ಲಿ ನಡೆಯುತ್ತಿವೆ. ಬರ್ಭರ ಹಿಂಸಾತ್ಮಕ ಅತ್ಯಾಚಾರ ಘಟನೆಗಳಿಗೆ ಅಲ್ಲಿನ ಸರ್ಕಾರವೇ ನೇರ ಹೊಣೆಯಾಗಿದೆ. ಆರೋಪಿಗಳಿಗೆ ರಕ್ಷಣೆ ನೀಡುವ ಸರ್ಕಾರದ ಧೋರಣೆಗಳನ್ನು ನಾವು ಖಂಡಿಸುತ್ತವೆ” ಎಂದರು.

ಪ್ರತಿಭಟನೆಯ ಲೈವ್ ನೋಡಿ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ

Posted by Naanu Gauri on Wednesday, September 30, 2020

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ಮೇಲೆ ಬರ್ಭರ ಹಿಂಸೆಯನ್ನೆಸಗಿ ಮಾರಣಾಂತಿಕವಾಗಿ ಗಾಯಗೊಳಿಸಲಾಗಿತ್ತು. ಸೆಪ್ಟೆಂಬರ್ 14 ರಿಂದ 29ರ ವರೆಗೆ ಸಾವು ಬದುಕುಗಳ ನಡುವೆ ಹೋರಾಟ ನಡೆಸಿದ ಯುವತಿ ಕೊನೆಗೂ ಸಾವನ್ನಪ್ಪಿದ್ದಾಳೆ. ಜೀವ ಇದ್ದಾಗಲೂ ಅಮಾನುಷವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಇಲಾಖೆ ಸಾವಿನಲ್ಲಿಯೂ ಆಕೆಗೆ ಘನತೆಯ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡದೆ ಕುಟುಂಬದವರನ್ನು ಕೂಡಿಟ್ಟು ಬಲವಂತವಾಗಿ ತಾವೇ ಬೆಳಗಿನ ಜಾವದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌.ಯು.ಸಿ.ಐ ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಶ್ರಿರಾಮ್ ಮಾತನಾಡಿ, “ಉತ್ತರ ಪ್ರದೇಶವೊಂದು ಗೂಂಡಾ ರಾಜ್ಯದಂತಾಗಿದ್ದು ಅಲ್ಲಿ ನೆಲದ ಕಾನೂನುಗಳಿಗೆ ಬೆಲೆಯೇ ಇಲ್ಲದ ಜಂಗಲ್ ರಾಜ್ ಆಗಿದೆ. ಉನ್ನಾವೋ ಅತ್ಯಾಚಾರ ಘಟನೆಯಲ್ಲಿ ಆರೋಪಿ ಕುಲದೀಪ್‌ ಸಿಂಗ್ ಸೆಂಗರ್‌ನನ್ನು ರಕ್ಷಿಸಲು ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಅದರ ತನಿಖೆ ನಡೆಸಿದ ಸಿ.ಬಿ.ಐ ಸ್ಥಳೀಯವಾಗಿ ಇಬ್ಬರು ಐ.ಪಿ.ಎಸ್ ಮತ್ತು ಒಬ್ಬರು ಐ.ಪಿ.ಎಸ್ ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿ, ಕ್ರಮಕ್ಕೆ ಸೂಚನೆ ನೀಡಿದ್ದರೂ ಅವರ ಮೇಲೆ ಯೋಗಿ ಸರಕಾರ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲ. ಇದು ಅಲ್ಲಿ ಅತ್ಯಾಚಾರ ದೌರ್ಜನ್ಯಗಳನ್ನು ಎಸಗುವವರಿಗೆ ರಾಜಾರೋಷವಾಗಿ ಅನುಮತಿ ಕೊಟ್ಟಂತಾಗಿದೆ” ಎಂದು ಟೀಕಿಸಿದರು.

ಇಂದು ನಾವು ಅತ್ಯಾಚಾರ ಘಟನೆಗಳ ವಿರುದ್ಧ ಪ್ರತಿಭಟಿಸುತ್ತಿರುವಾಗಲೇ ಉತ್ತರ ಪ್ರದೇಶದ ಬಲರಾಂಪುರ ಮತ್ತು ಅರಮ್ ಘರ್ ಗಳಲ್ಲಿ ಅಪ್ರಾಪ್ತರ ಮೇಲೆ ಅತ್ಯಾಚಾರಗಳು ನಡೆದ ಸುದ್ದಿಗಳು ಬರುತ್ತಿವೆ. ಉತ್ತರ ಪ್ರದೇಶದಲ್ಲಿ ಕಾನೂನು ನಿಯಮಗಳು ಮನುಧರ್ಮ ಶಾಸ್ತ್ರದ ಶ್ರೇಣೀಕೃತ ಜಾತಿ ವ್ಯವಸ್ಥೆಯ ಭಾಗವಾಗಿ ನಡೆಯುತ್ತಿದೆ ಎಂಬುದು ಇದರಿಂದ ಮತ್ತೆ ಮತ್ತೆ ಸಾಬೀತಾಗುತ್ತಿದೆ ಎಂದು ಕಿಡಿಕಾರಿದರು.

ಹಕ್ಕೊತ್ತಾಯಗಳು

  • ಅತ್ಯಾಚಾರದ ಸಂತ್ರಸ್ಥೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು.
  • ಶವ ಸಂಸ್ಕಾರಕ್ಕೂ ಅವಕಾಶ ನೀಡದೆ ಅಪರಾತ್ರಿಯಲ್ಲಿ ತಾವೇ ಚಿತೆಗೆ ಬೆಂಕಿ ಇಟ್ಟ ಪೊಲೀಸ್ ಮತ್ತು ಇತರ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು.
  • ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೇ ಕಾನೂನಿಗೆ ಅಪಚಾರ ಮಾಡಿದ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು.
  • ದೇಶಾದ್ಯಂತ ಹೆಣ್ಣಮಕ್ಕಳಿಗೆ ರಕ್ಷಣೆ ನೀಡುವಂತಹ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು.

ಕರ್ನಾಟಕದ ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಹೊಳಲು ಗ್ರಾಮದಲ್ಲಿ ದಿನಾಂಕ 6-9-2020 ರಂದು
ಮಹಿಳೆಯೊಬ್ಬರ ಮೇಲೆ ಬಲಾತ್ಕಾರ ಮತ್ತು ಕೊಲೆ ಪ್ರಯತ್ನ ನಡೆದಿದೆ ಎಂಬ ವರದಿಗಳಿವೆ. ಕರ್ನಾಟಕ ಸರಕಾರವು ಈ ಕೂಡಲೇ ಕಾರ್ಯಪ್ರವೃತ್ತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಿ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ, ಡಿಎಸ್ಎಸ್ ಮುಖಂಡ ಮೋಹನ್ ರಾಜ್, ದಲಿತ ಹಕ್ಕುಗಳ ಸಮಿತಿಯ ನಾಗಣ್ಣ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ್ ರೆಡ್ಡಿ, ಆರ್ ಇಂಡಿಯಾ ಲಾಯರ್ಸ್ ಯುನಿಯನ್ ರಾಜ್ಯ ಸಮಿತಿ ಸದಸ್ಯ ಶರಣ ಬಸಪ್ಪ ಮರದ್, ಎಐಎಂಎಂಎಸ್ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್.ಶೋಭಾ ಮುಂತಾದವರು ಭಾಗವಹಿಸಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಯೂ ಉತ್ತರ ಪ್ರದೇಶದ ಅತ್ಯಚಾರ ಘಟನೆ ಖಂಡಿಸಿ, ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.

ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಯುವತಿಯ ಮೇಲೆ ನಡೆದ ಮನುಷ್ಯತ್ವ ತಲೆತಗ್ಗಿಸುವಂತ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಪ್ರತಿಭಟನೆ

Posted by ಅಬ್ದುಲ್ ಸಮದ್ ಚೌದ್ರಿ on Wednesday, September 30, 2020


ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...