Homeಕರ್ನಾಟಕಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಬಿಜೆಪಿಗರೇ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ ಆರ್‌ಎಸ್‌ಎಸ್ ಶಾಖೆಯ ನಿತ್ಯ ಪಾಠವಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಚಿತ್ತಾಪುರದಲ್ಲಿ ಮಹಿಳೆಯೊಬ್ಬರ ಮೇಲೆ ಆರ್‌ಎಸ್‌ಎಸ್‌ನ ವ್ಯಕ್ತಿಯೊಬ್ಬರು ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಮಹಿಳೆಯು ದೂರಿನಲ್ಲಿ, ”ಆರ್‌ಎಸ್‌ಎಸ್‌ನ ವ್ಯಕ್ತಿ, ನನ್ನ ಮತ್ತು ನನ್ನ ಎರಡು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ್ದಾನೆ. ನನಗೆ ಬ್ಲ್ಯಾಕ್‌ಮೇಲ್ ಮಾಡಿ ನನ್ನ ಪರಿದಾರದ ಸದಸ್ಯರಿಗೆ ಚಾರ್ಚ‌ರ್ ಮಾಡುತ್ತಿದ್ದಾನೆ. ಆತ ನನ್ನ ಜೊತೆ 07 ವರ್ಷದ ಸಂಭಂಧವಿದೆ, ನನಗೆ ಮೋಸ ಮಾಡಿದ್ದಾನೆ. ನನಗೆ ನಂಬಿಕೆಯ ಮಾತುಗಳನ್ನು ಹೇಳಿ ನನ್ನ ಎಲ್ಲಾ ಆಸ್ತಿಯನ್ನು ಪಡೆದುಕೊಂಡಿದ್ದಾರೆ. ಈಗ ನಾನು ಎಲ್ಲವನ್ನು ಕಳೆದುಕೊಂಡಿದ್ದೇನೆ. ಅವನ ಮನೆಯವರಿಂದಲೂ ನನಗೆ ಅನೇಕ ತೊಂದರೆಗಳು ಆಆಗಿವೆ ಎಂದು ಆರೋಪ ಮಾಡಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಕಾಂಗ್ರೆಸ್, ”ಚಿತ್ತಾಪುರದಲ್ಲಿ RSSನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ, ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

”ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತಿಸಲಿದೆ” ಎಂದು ಕಾಂಗ್ರೆಸ್ ಹೇಳಿದೆ.

ಶನಿವಾರ ಇನ್ನೊಂದು ಪ್ರಕರಣದಲ್ಲಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ, ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿತ್ತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸದ್ಯ ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಬಿವಿಪಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬನ ಕರ್ಮಕಾಂಡ ಬಯಲಾಗಿದೆ. ಸಂಘದ ಶಾಖೆಯಲ್ಲಿ ಹೇಳುವ ಧರ್ಮ ರಕ್ಷಣೆಯ ಪಾಠ ಇದೇನಾ? ಎಂದು ಬಿಜೆಪಿಯವರಿಗೆ ಪ್ರಶ್ನೆ ಮಾಡಿದ್ದಾರೆ.

”ಸಂಸದ ತೇಜಸ್ವಿ ಸೂರ್ಯ ಅವರೇ, ಬಿಜೆಪಿ ಕಾಮಣ್ಣರಿಂದ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ “ಹೆಲ್ಪ್ ಲೈನ್” ಯಾವಾಗ ಆರಂಭಿಸುವಿರಿ?” ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...