ಬಿಜೆಪಿಗರೇ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ ಆರ್ಎಸ್ಎಸ್ ಶಾಖೆಯ ನಿತ್ಯ ಪಾಠವಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಚಿತ್ತಾಪುರದಲ್ಲಿ ಮಹಿಳೆಯೊಬ್ಬರ ಮೇಲೆ ಆರ್ಎಸ್ಎಸ್ನ ವ್ಯಕ್ತಿಯೊಬ್ಬರು ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಮಹಿಳೆಯು ದೂರಿನಲ್ಲಿ, ”ಆರ್ಎಸ್ಎಸ್ನ ವ್ಯಕ್ತಿ, ನನ್ನ ಮತ್ತು ನನ್ನ ಎರಡು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ್ದಾನೆ. ನನಗೆ ಬ್ಲ್ಯಾಕ್ಮೇಲ್ ಮಾಡಿ ನನ್ನ ಪರಿದಾರದ ಸದಸ್ಯರಿಗೆ ಚಾರ್ಚರ್ ಮಾಡುತ್ತಿದ್ದಾನೆ. ಆತ ನನ್ನ ಜೊತೆ 07 ವರ್ಷದ ಸಂಭಂಧವಿದೆ, ನನಗೆ ಮೋಸ ಮಾಡಿದ್ದಾನೆ. ನನಗೆ ನಂಬಿಕೆಯ ಮಾತುಗಳನ್ನು ಹೇಳಿ ನನ್ನ ಎಲ್ಲಾ ಆಸ್ತಿಯನ್ನು ಪಡೆದುಕೊಂಡಿದ್ದಾರೆ. ಈಗ ನಾನು ಎಲ್ಲವನ್ನು ಕಳೆದುಕೊಂಡಿದ್ದೇನೆ. ಅವನ ಮನೆಯವರಿಂದಲೂ ನನಗೆ ಅನೇಕ ತೊಂದರೆಗಳು ಆಆಗಿವೆ ಎಂದು ಆರೋಪ ಮಾಡಿದ್ದಾರೆ.
ಈ ವಿಚಾರವಾಗಿ ಟ್ವಿಟ್ ಮಾಡಿರುವ ಕಾಂಗ್ರೆಸ್, ”ಚಿತ್ತಾಪುರದಲ್ಲಿ RSSನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ, ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.
ಚಿತ್ತಾಪುರದಲ್ಲಿ RSSನ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಗೆ ವಂಚಿಸಿ, ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.
ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವುದೇ RSS ಶಾಖೆಯ ನಿತ್ಯ ಪಾಠವೇ @BJP4Karnataka?
ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ… pic.twitter.com/tYrpp5iXAx
— Karnataka Congress (@INCKarnataka) June 17, 2023
”ಅತ್ಯಾಚಾರ, ಅನಾಚಾರ, ಶಾಂತಿಭಂಗ ಮುಂತಾದ ಸಮಾಜಘಾತುಕ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಯ ಚಟುವಟಿಕೆಗಳನ್ನು ನಿಯಂತ್ರಿಸುವ ಬಗ್ಗೆ ನಮ್ಮ ಸರ್ಕಾರ ಚಿಂತಿಸಲಿದೆ” ಎಂದು ಕಾಂಗ್ರೆಸ್ ಹೇಳಿದೆ.
ಶನಿವಾರ ಇನ್ನೊಂದು ಪ್ರಕರಣದಲ್ಲಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ, ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿತ್ತು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ
ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಸದ್ಯ ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್ಎಸ್ಯುಐ ಡಿವೈಎಸ್ಪಿಯವರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಬಿವಿಪಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬನ ಕರ್ಮಕಾಂಡ ಬಯಲಾಗಿದೆ. ಸಂಘದ ಶಾಖೆಯಲ್ಲಿ ಹೇಳುವ ಧರ್ಮ ರಕ್ಷಣೆಯ ಪಾಠ ಇದೇನಾ? ಎಂದು ಬಿಜೆಪಿಯವರಿಗೆ ಪ್ರಶ್ನೆ ಮಾಡಿದ್ದಾರೆ.
”ಸಂಸದ ತೇಜಸ್ವಿ ಸೂರ್ಯ ಅವರೇ, ಬಿಜೆಪಿ ಕಾಮಣ್ಣರಿಂದ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ “ಹೆಲ್ಪ್ ಲೈನ್” ಯಾವಾಗ ಆರಂಭಿಸುವಿರಿ?” ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಬಿವಿಪಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬನ ಕರ್ಮಕಾಂಡ ಬಯಲಾಗಿದೆ.
ಸಂಘದ ಶಾಖೆಯಲ್ಲಿ ಹೇಳುವ ಧರ್ಮ ರಕ್ಷಣೆಯ ಪಾಠ ಇದೇನಾ @BJP4Karnataka?@Tejasvi_Surya ಅವರೇ,
ಬಿಜೆಪಿ ಕಾಮಣ್ಣರಿಂದ ಕಿರುಕುಳ ಅನುಭವಿಸುವ ಹೆಣ್ಣುಮಕ್ಕಳಿಗೆ "ಹೆಲ್ಪ್ ಲೈನ್" ಯಾವಾಗ… pic.twitter.com/YeHgPmQVZb— Karnataka Congress (@INCKarnataka) June 17, 2023