Homeಮುಖಪುಟಅತ್ಯಾಚಾರ ಯತ್ನ ವಿಫಲ; 6 ವರ್ಷದ ಬಾಲಕಿಯನ್ನು ಕ್ರೂರವಾಗಿ ಹತ್ಯೆಗೈದ ಕಾವಲುಗಾರ

ಅತ್ಯಾಚಾರ ಯತ್ನ ವಿಫಲ; 6 ವರ್ಷದ ಬಾಲಕಿಯನ್ನು ಕ್ರೂರವಾಗಿ ಹತ್ಯೆಗೈದ ಕಾವಲುಗಾರ

- Advertisement -
- Advertisement -

ಅತ್ಯಾಚಾರ ಯತ್ನ ವಿಫಲವಾದ ನಂತರ ಆರು ವರ್ಷದ ಬಾಲಕಿಯನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ, ಆಕೆಯ ಗುರುತನ್ನು ಮರೆಮಾಚುವ ಸಲುವಾಗಿ ತಲೆಯನ್ನು ಕಲ್ಲಿನಿಂದ ಜಜ್ಜಿಹಾಕಲಾಗಿದೆ ಎಂದು ಆಗ್ರಾ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಬಿಡಾಡಿ ದನಗಳಿಂದ ಬೆಳೆಗಳನ್ನು ರಕ್ಷಿಸಲು ನೇಮಿಸಿಕೊಂಡಿದ್ದ 43 ವರ್ಷದ ಖಾಸಗಿ ಕಾವಲುಗಾರನನ್ನು ಬಾಲಕಿಯನ್ನು ಕೊಂದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಕಾವಲುಗಾರ ರಾಜವೀರ್ ಸಿಂಗ್ ಮೊದಲು ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾನೆ. ಆತ ಯಶಸ್ವಿಯಾಗದಿದ್ದಾಗ, ಹೊಲದಲ್ಲಿನ ನೀರಿನ ತೊಟ್ಟಿಯಲ್ಲಿ ಬಾಲಕಿಯನ್ನು ಮುಳುಗಿಸಿ ಕೊಲೆ ಮಾಡಿದ್ದಾನೆ.

ಡಿಸೆಂಬರ್ 30ರಂದು ಆಗ್ರಾ ಜಿಲ್ಲೆಯ ಎತ್ಮಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರು ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ತಂದೆಯ ದೂರಿನಂತೆ, ಎತ್ಮಾದ್‌ಪುರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 302ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನಗರ) ಸೂರಜ್ ಕುಮಾರ್ ರೈ ಸುದ್ದಿಗಾರರಿಗೆ ತಿಳಿಸಿದರು.

ರಾಜ್ವೀರ್ ಸಿಂಗ್ ಸ್ವಲ್ಪ ಸಮಯದವರೆಗೆ ಹುಡುಗಿಯನ್ನು ಪತ್ತೆಹಚ್ಚಲು ಗ್ರಾಮಸ್ಥರಿಗೆ ಸಹಾಯ ಮಾಡುವಂತೆ ನಟಿಸಿದ್ದಾನೆ. ಆದರೆ, ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಬಾಲಕಿಯೊಂದಿಗೆ ಕೊನೆಯದಾಗಿ ಆತ ಕಾಣಿಸಿಕೊಂಡಿದ್ದಾಗಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ, ಆತನನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಗದ್ದೆಯಲ್ಲಿ ಬಾಲಕಿಯನ್ನು ಹಿಡಿದು ಅತ್ಯಾಚಾರಕ್ಕೆ ಪ್ರಯತ್ನಿಸಿರುವುದಾಗಿ ಪೊಲೀಸರ ವಿಚಾರಣೆಯ ಸಮಯದಲ್ಲಿ ರಾಜವೀರ್ ಸಿಂಗ್ ತಪ್ಪು ಒಪ್ಪಿಕೊಂಡಿದ್ದಾನೆ. ಅತ್ಯಾಚಾರ ಯತ್ನ ವಿಫಲವಾದ ನಂತರ ಅವನು ಬಾಲಕಿಯನ್ನು ಗದ್ದೆಯ ನೀರಿನ ಟ್ಯಾಂಕಿನಲ್ಲಿ ಮುಳುಗಿಸಿದ್ದಾನೆ. ಗುರುತು ಸಿಗಬಾರದು ಎಂಬ ಕಾರಣಕ್ಕೆ ತಲೆಯ ಮೇಲೆ ಕಲ್ಲು ಹಾಕಿದ್ದಾನೆ ಎಂದು ರೈ ಮಾಹಿತಿ ನೀಡಿದರು.

ರಾಜವೀರ್ ಸಿಂಗ್ ನನ್ನು ಈಗಾಗಲೇ ಬಂಧಿಸಲಾಗಿದ್ದು, ಆತನ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ; ಪೋಕ್ಸೊ ಪ್ರಕರಣದಲ್ಲಿ ಅಮಾನವೀಯ ವರ್ತನೆ: ನ್ಯಾಯಾಧೀಶರಿಗೆ ತರಬೇತಿ ಪಡೆಯಲು ಸೂಚಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...