Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...