Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...