Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...