Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...