Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...