Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...