Homeಮುಖಪುಟಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

- Advertisement -
- Advertisement -

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ.

ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು.

ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. ಇದೀಗ ನಿರಪರಾಧಿಯಾಗಿರುವ ಅವರು ಸುಖಾಸುಮ್ಮನೆ ಮನೆ ಕಳೆದುಕೊಂಡಂತಾಗಿದೆ.

ಶಿಕ್ಷೆಯ ಭಾಗವಾಗಿ ಮನೆ ಕೆಡವಲು ಅವಕಾಶ ನೀಡುವ ಯಾವುದೇ ನಿಬಂಧನೆಗಳು ಭಾರತೀಯ ಕಾನೂನಿನಲ್ಲಿ ಇಲ್ಲ. ಆದಾಗ್ಯೂ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿನ ಸರ್ಕಾರಗಳು ಕೇವಲ ಆರೋಪ ಕೇಳಿ ಬಂದ ತಕ್ಷಣವೇ ಆರೋಪಿಗಳ ಮನೆಗಳನ್ನು ಕೆಡವುವ ಪರಿಪಾಠವಿದೆ. ಇದು ಮುಸ್ಲಿಮರನ್ನು ಗುರಿಯಾಗಿಸುವ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ.

ದೋಷಮುಕ್ತಗೊಂಡಿರುವ ಬಳಿಕ ಮಾತನಾಡಿರುವ ಶಫೀಕ್ ಅನ್ಸಾರಿ “ನಾನು ಕಷ್ಟಪಟ್ಟು ಸಂಪಾದಿಸಿದ ಉಳಿತಾಯದಿಂದ 4,000 ಚದರ ಅಡಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೆ. ಈಗ, ಕೇವಲ ಅವಶೇಷಗಳು ಮಾತ್ರ ಉಳಿದಿವೆ. ನಾವು ನನ್ನ ಸಹೋದರನ ಮನೆಯಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ನಮ್ಮ ಬಳಿ ಮನೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಇತ್ತು. ಆದರೂ, ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮನೆ ಕೆಡವಿದರು. ದಾಖಲೆಗಳನ್ನು ತೋರಿಸಲು ಮತ್ತು ಏನೂ ಮಾತನಾಡಲು ನಮಗೆ ಅವಕಾಶ ಕೊಟ್ಟಿರಲಿಲ್ಲ. ಬಹಳ ಸುಲಭವಾಗಿ ನಮ್ಮ ಮನೆ ಧ್ವಂಸಗೊಳಿಸಿದರು. ನನ್ನ ಕುಟುಂಬದಲ್ಲಿ ಏಳು ಜನರಿದ್ದಾರೆ. ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾನು ಮೂರು ತಿಂಗಳು ಕಾಲ ಜೈಲಿನಲ್ಲಿದೆ” ಎಂದು ಭೋಪಾಲ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಸಾರಂಗಪುರ ಸ್ಥಳೀಯ ಸಂಸ್ಥೆಯ ಮಾಜಿ ಕಾರ್ಪೊರೇಟರ್ ಅನ್ಸಾರಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಮಗನ ಮದುವೆಗೆ ಸಹಾಯ ಮಾಡುವ ನೆಪದಲ್ಲಿ ಫೆಬ್ರವರಿ 4, 2021ರಂದು ನನ್ನನ್ನು ಅವರ ಮನೆಗೆ ಕರೆಸಿಕೊಂಡು ಶಫೀಕ್ ಅನ್ಸಾರಿ ಅತ್ಯಾಚಾರ ಮಾಡಿದ್ದಾರೆ ಎಂದು ಮಾರ್ಚ್ 4, 2021ರಂದು ನೀಡಿದ್ದ ದೂರಿನಲ್ಲಿ ಮಹಿಳೆ ಆರೋಪಿಸಿದ್ದರು.

ಅನ್ಸಾರಿ ಅವರ ಮನೆಯನ್ನು 13 ಮಾರ್ಚ್ 2021ರಂದು ಸರ್ಕಾರ ಕೆಡವಿತ್ತು. ಆ ಸಂದರ್ಭವನ್ನು ಸ್ಮರಿಸಿದ ಅನ್ಸಾರಿ “ಅಂದು ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಬುಲ್ಡೋಝರ್‌ನೊಂದಿಗೆ ಅಧಿಕಾರಿಗಳು ಬಂದರು. ಏನಾಗುತ್ತಿದೆ ಎಂದು ನನ್ನ ಮನೆಯವರಿಗೆ ಅರ್ಥವಾಗುವ ಮೊದಲೇ, ಅವರು ಮನೆಯನ್ನು ಕೆಡವಿ ಆಗಿತ್ತು. ನಾನು ಆಗ ತಲೆಮರೆಸಿಕೊಂಡಿದ್ದೆ. ಮರುದಿನ ಪೊಲೀಸರ ಮುಂದೆ ಶರಣಾದೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಶಫೀಕ್ ಅನ್ಸಾರಿ ಅವರ ಮಗ ಮತ್ತು ಸಹೋದರ ವಿರುದ್ದ ಅತ್ಯಾಚಾರ ದೂರು ದಾಖಲಾಗಿತ್ತು. ಫೆಬ್ರವರಿ 14ರಂದು ಎಲ್ಲರನ್ನೂ ದೋಷಮುಕ್ತಗೊಳಿಸಿ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ ತೀರ್ಪು ಪ್ರಕಟಿಸಿದ್ದಾರೆ.

ತೀರ್ಪು ನೀಡುವ ವೇಳೆ “ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಸಾಕ್ಷ್ಯಗಳಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದಿದೆ. ಮನೆ ಸಮೀಪವೇ ಪೊಲೀಸ್ ಠಾಣೆ ಇದ್ದರೂ ಆಪಾದಿತ ಅತ್ಯಾಚಾರದ ಮಹಿಳೆ ತಕ್ಷಣ ದೂರು ನೀಡಿರಲಿಲ್ಲ. ಆಕೆಯ ಮಗನ ಮದುವೆ ಮುಗಿದು 15 ದಿನಗಳವರೆಗೆ ಪತಿಗಾಗಲಿ, ಮಕ್ಕಳಿಗಾಗಲಿ ಅತ್ಯಾಚಾರ ನಡೆದಿದೆ ಎಂದು ತಿಳಿಸಿರಲಿಲ್ಲ. ಈ ವಿಳಂಬಕ್ಕೆ ಸಮಂಜಸವಾದ ಕಾರಣವನ್ನು ಅವರು ನ್ಯಾಯಾಲಯಕ್ಕೆ ನೀಡಿಲ್ಲ. ದೂರುದಾರರ ಮಾದರಿಗಳಲ್ಲಿ ಯಾವುದೇ ಮಾನವ ವೀರ್ಯ ಕಂಡು ಬಂದಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಪುರಾವೆಗಳಿಂದ ಅತ್ಯಾಚಾರವನ್ನು ದೃಢೀಕರಿಸಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿಯಾಗಿದೆ.

ಸುಳ್ಳು ಆರೋಪ ಪರಿಗಣಿಸಿ ತನ್ನ ಮನೆ ಕೆಡವಿದ್ದ ಸರ್ಕಾರದ ವಿರುದ್ದ ನ್ಯಾಯಾಲಯದ ಮೊರೆ ಹೋಗಲು ಅನ್ಸಾರಿ ಯೋಜಿಸುತ್ತಿದ್ದಾರೆ ಎಂದು ವರದಿ ಹೇಳಿದೆ.

90 ವರ್ಷಗಳಷ್ಟು ಹಳೆಯ ‘ನಮಾಜ್ ವಿರಾಮ’ ಸಂಪ್ರದಾಯಕ್ಕೆ ಅಂತ್ಯ ಹಾಡಿದ ಅಸ್ಸಾಂ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...