Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...