Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....