Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...