Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...