Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...