Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...