Homeಮುಖಪುಟಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಅತ್ಯಾಚಾರ ಪ್ರಕರಣ | CPI(M) ಶಾಸಕ, ನಟ ಮುಖೇಶ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ

- Advertisement -
- Advertisement -

ಮಹಿಳಾ ನಟಿಯೊಬ್ಬರ ದೂರಿನ ಮೇರೆಗೆ ಆಡಳಿತಾರೂಢ ಸಿಪಿಐ(ಎಂ)ನ ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಔಪಚಾರಿಕವಾಗಿ ಬಂಧಿಸಿದೆ ಎಂದು ವರದಿಯಾಗಿದೆ. ”ಶಾಸಕರನ್ನು ಬಂಧಿಸಲಾಗಿದ್ದು, ಅವರ ವೈದ್ಯಕೀಯ ಪರೀಕ್ಷೆ ಮತ್ತು ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಯಿತು. ಈ ತಿಂಗಳ ಆರಂಭದಲ್ಲಿ ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು” ಎಂದು ಅವರ ವಕೀಲರು ದೃಢಪಡಿಸಿದ್ದಾರೆ. ಅತ್ಯಾಚಾರ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಟನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವರನ್ನು ವಿಚಾರಣೆಗೆ ಕರೆದ ನಂತರ ಅವರ ಬಂಧನವನ್ನು ದಾಖಲಿಸಲಾಗಿದೆ. ಬೆಳಗ್ಗೆ 9.45ಕ್ಕೆ ಕೊಚ್ಚಿಯ ಕರಾವಳಿ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿರುವ ಎಸ್‌ಐಟಿ ಎದುರು ಮುಕೇಶ್‌ ಹಾಜರಿದ್ದು, ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ತಿರುಪತಿ ದೇವಸ್ಥಾನಕ್ಕೆ ತುಪ್ಪ ಪೂರೈಸಿದ್ದು ಪಾಕಿಸ್ತಾನಿ ಮುಸ್ಲಿಮರೆ?

ಮುಖೇಶ್ ವಿರುದ್ಧ ಎರಡು ಪ್ರಕರಣಗಳನ್ನು ವಡಕ್ಕಂಚೇರಿ ಪೊಲೀಸರು ಮತ್ತು ಇನ್ನೊಂದು ಮರಡು ಪೊಲೀಸರು ದಾಖಲಿಸಿದ್ದಾರೆ. ಎರ್ನಾಕುಲಂ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಲಯ ಸೆಪ್ಟಂಬರ್ 5 ರಂದು ಮುಕೇಶ್ ವಿರುದ್ಧ ಮಹಿಳಾ ನಟಿ ಮಾಡಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡಿತ್ತು.

ಮಹಿಳೆಯ ಆರೋಪದ ನಂತರ, ಮುಖೇಶ್ ವಿರುದ್ಧ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅದರೆ ನಟ ಮುಖೇಶ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ದೂರುದಾರ ಮಹಿಳೆಯ ಬ್ಲ್ಯಾಕ್‌ಮೇಲ್ ಪ್ರಯತ್ನಗಳಿಗೆ ಮಣಿಯಲು ನಿರಾಕರಿಸಿದ ಪರಿಣಾಮವೇ ಈ ಆರೋಪಗಳು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಬದ್ಲಾಪುರ್ ಲೈಂಗಿಕ ದೌರ್ಜನ್ಯ ಆರೋಪಿ ಎನ್‌ಕೌಂಟರ್ ಪ್ರಕರಣ; ಪೊಲೀಸರ ಮೇಲೆ ಕುಟುಂಬಸ್ಥರಿಂದ ಗಂಭೀರ ಆರೋಪ

ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯಲ್ಲಿ ಬಹಿರಂಗಗೊಂಡಿರುವ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ನಂತರ ಹಲವಾರು ‘ಗಣ್ಯ’ ಮಲಯಾಳಂ ಚಿತ್ರರಂಗದ ವ್ಯಕ್ತಿಗಳ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

2017 ರಲ್ಲಿ ನಟಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ನಂತರ ಕೇರಳ ಸರ್ಕಾರವು ಸಮಿತಿಯನ್ನು ರಚಿಸಿತ್ತು. ಸಮಿತಿಯ ವರದಿಯು ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಎತ್ತಿ ತೋರಿಸಿದೆ. ಹಲವಾರು ನಟರು ಮತ್ತು ನಿರ್ದೇಶಕರನ್ನು ಒಳಗೊಂಡ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಅದರ ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ಆಗಸ್ಟ್ 25 ರಂದು ರಾಜ್ಯ ಸರ್ಕಾರವು ಘೋಷಿಸಿತು.

ಕೇರಳ ಹೈಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮಲಯಾಳಂ ನಟ ಸಿದ್ದಿಕ್ ಅವರನ್ನು ಬಂಧಿಸಲು ಪೊಲೀಸರು ಲುಕ್‌ಔಟ್ ಸುತ್ತೋಲೆ ಹೊರಡಿಸಿ ಹುಡುಕಾಟವನ್ನು ತೀವ್ರಗೊಳಿಸಿದ್ದಾರೆ. ಯುವ ನಟಿಯೊಬ್ಬರು ಸಿದ್ದಿಕ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ನಟ ದೇಶದಿಂದ ಪಲಾಯನ ಮಾಡುವುದನ್ನು ತಡೆಯಲು ವಿಮಾನ ನಿಲ್ದಾಣಗಳಲ್ಲಿ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಅತ್ಯಾಚಾರ ಪ್ರಕರಣ

ವಿಡಿಯೊ ನೋಡಿ: ರೈತರ ಕರೆ ಮೇರೆಗೆ ಜಿಯೋ ಇಂದ ಪೋರ್ಟ್‌ ಆದವರೊಂದಿಗೆ ಜಿಯೋ ಕಂಪೆನಿಯವರ ಸ್ವಾರಸ್ಯಕರ ಸಂಭಾಷಣೆ ಕೇಳಿ. JioCustomerCare

ಇದನ್ನೂನೋಡಿ: ಸಿದ್ದರಾಮಯ್ಯ ವರ್ಸಸ್ ಸೋಮಣ್ಣ: ವರುಣಾ ಕ್ಷೇತ್ರದ ಮತದಾರರ ಮನದ ಮಾತು. ಅತ್ಯಾಚಾರ ಪ್ರಕರಣ ಅತ್ಯಾಚಾರ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...