Homeಮುಖಪುಟಅತ್ಯಾಚಾರ ಪ್ರಕರಣ: ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ನಟ ಸಿದ್ದಿಕ್ ವಿರುದ್ಧ ಲುಕ್ ಔಟ್ ನೋಟಿಸ್

ಅತ್ಯಾಚಾರ ಪ್ರಕರಣ: ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ನಟ ಸಿದ್ದಿಕ್ ವಿರುದ್ಧ ಲುಕ್ ಔಟ್ ನೋಟಿಸ್

- Advertisement -
- Advertisement -

ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ತಿರಸ್ಕರಿಸಿದ ಕೆಲವೇ ದಿನಗಳಲ್ಲಿ ಮಲಯಾಳಂನ ಖ್ಯಾತ ನಟ ಸಿದ್ದಿಕ್ ಅವರಿಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ಸಿದ್ದಿಕ್ ಅವರ ಭಾವಚಿತ್ರದೊಂದಿಗೆ ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿ ವಿವಿಧ ಪತ್ರಿಕೆಗಳಲ್ಲಿ ಲುಕ್‌ಔಟ್ ನೋಟಿಸ್ ಪ್ರಕಟವಾಗಿದೆ. ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅವರು ಪ್ರಕರಣವನ್ನು ಎದುರಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸೆಪ್ಟೆಂಬರ್ 24 ರಂದು ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಸಿದ್ದಿಕ್ ನಾಪತ್ತೆಯಾಗಿದ್ದಾರೆ. ಕಳೆದ ತಿಂಗಳು ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ ಪೊಲೀಸರು ಅವರನ್ನು ಬಂಧಿಸಲು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ.

ಕಳೆದ ತಿಂಗಳು, ನಟಿಯೊಬ್ಬರು ಮಾಧ್ಯಮಗಳ ಮೂಲಕ ಅತ್ಯಾಚಾರದ ಆರೋಪವನ್ನು ಎತ್ತಿದ್ದರು. ಇದರ ನಂತರ ಸಿದ್ದಿಕ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಾಯಿಸಿದರು. ನಂತರ ಮಹಿಳೆ ತಿರುವನಂತಪುರಂ ನಗರ ಪೊಲೀಸರಿಗೆ ದೂರು ನೀಡಿದ್ದರು.

ಕಳೆದ ತಿಂಗಳು ಹೇಮಾ ಸಮಿತಿಯ ವರದಿ ಬಿಡುಗಡೆಯಾದ ನಂತರ, ಕೆಲವು ಮಹಿಳೆಯರು ಚಿತ್ರರಂಗದ ಕೆಲವು ಪ್ರಮುಖ ನಟರು ಸೇರಿದಂತೆ ವಿವಿಧ ಚಲನಚಿತ್ರ ವೃತ್ತಿಪರರ ವಿರುದ್ಧ ಲೈಂಗಿಕ ಕಿರುಕುಳ/ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದರು. ಸಿದ್ದಿಕ್ ಹೊರತುಪಡಿಸಿ ಉಳಿದವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಸಿದ್ದಿಕ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶ ಸಿಎಸ್ ಡಯಾಸ್, “ಅರ್ಜಿದಾರರ ವಿರುದ್ಧದ ಆರೋಪಗಳ ಒಟ್ಟಾರೆ ಪರಿಶೀಲನೆ, ಗಂಭೀರತೆ, ಜೊತೆಗೆ ದಾಖಲಾತಿಯಲ್ಲಿ ಇರಿಸಲಾದ ವಸ್ತುಗಳ ಜೊತೆಗೆ ಅಪರಾಧದಲ್ಲಿ ಅರ್ಜಿದಾರರ ಪಾಲ್ಗೊಳ್ಳುವಿಕೆಯನ್ನು ಪ್ರಾಥಮಿಕವಾಗಿ ತೋರಿಸುತ್ತದೆ. ಅಪರಾಧದ ಸರಿಯಾದ ತನಿಖೆಗಾಗಿ ಕಸ್ಟಡಿ ವಿಚಾರಣೆ ಅನಿವಾರ್ಯ” ಎಂದಿದ್ದರು.

“ಒಬ್ಬ ಮಹಿಳೆಯ ಲೈಂಗಿಕ ದೌರ್ಜನ್ಯದ ಅನುಭವಗಳು ಅವಳ ಪಾತ್ರದ ಪ್ರತಿಬಿಂಬವಲ್ಲ. ಆದರೆ, ಅವಳ ಸಂಕಟದ ಸೂಚನೆಯಾಗಿದೆ. ಮಾತನಾಡುವ ಮಹಿಳೆಯನ್ನು ದೂಷಿಸುವ ಪ್ರಯತ್ನವು ಅವಳನ್ನು ಮೌನಗೊಳಿಸುವ ತಂತ್ರವಾಗಿರಬಹುದು, ಇದು ಕಾನೂನಿನ ಪಾರಮ್ಯಕ್ಕೆ ಪ್ರತಿಕೂಲವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆ ಮತ್ತು ದೂರಿನ ನಡುವೆ ಎಂಟು ವರ್ಷಗಳ ವಿಳಂಬವಾಗಿದೆ ಎಂಬ ವಾದದ ಮೇಲೆ, ಲೈಂಗಿಕ ಕಿರುಕುಳ ಮತ್ತು ಹಲ್ಲೆಯ ಬಲಿಪಶುಗಳು ಮಾನಸಿಕ, ಭಾವನಾತ್ಮಕ ಮತ್ತು ಸಾಮಾಜಿಕ ಅಡೆತಡೆಗಳನ್ನು ಅನುಭವಿಸಬಹುದು. ಇದು ಆಘಾತದ ಸಂದರ್ಭದಲ್ಲಿ ಅಗತ್ಯವಾಗಿ ಅರ್ಥಮಾಡಿಕೊಳ್ಳಬೇಕು ಎಂದು ನ್ಯಾಯಾಲಯವು ಹೇಳಿದೆ.

ಈ ಘಟನೆಯು 2016 ರಲ್ಲಿ ತಿರುವನಂತಪುರಂನ ಹೋಟೆಲ್ ಕೊಠಡಿಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಸಿದ್ದಿಕ್ ಅವರು 2014 ರಲ್ಲಿ ಫೇಸ್‌ಬುಕ್ ಮೂಲಕ ಸಂತ್ರಸ್ತೆಯೊಂದಿಗೆ ಸಂಪರ್ಕ ಹೊಂದಿದ್ದರು. ಆಗಾಗ್ಗೆ ಆಕೆ ಮತ್ತು ಅವರ ತಾಯಿಯೊಂದಿಗೆ ಫೋನ್ ಮತ್ತು ಸ್ಕೈಪ್ ಮೂಲಕ ಸಂವಹನ ನಡೆಸುತ್ತಿದ್ದರು. ಸಂತ್ರಸ್ತೆಯನ್ನು ಸಿನಿಮಾದಲ್ಲಿ ಕೆಲಸ ಮಾಡಲು ಪ್ರೋತ್ಸಾಹಿಸಿ, ಸಹಾಯ ಮಾಡುವ ಭರವಸೆ ನೀಡಿದದರು ಎಂದು ತಿಳಿದುಬಂದಿದೆ.

2016 ರಲ್ಲಿ, ಆರೋಪಿಯು ಸಂತ್ರಸ್ತೆ ಮತ್ತು ಆಕೆಯ ಪೋಷಕರನ್ನು ಚಲನಚಿತ್ರ ಪ್ರೀಮಿಯರ್ ಶೋಗೆ ಹಾಜರಾಗಲು ಆಹ್ವಾನಿಸಿದ್ದರು. ನಂತರ, ಅವರು ಹೊಸ ಚಿತ್ರದ ಬಗ್ಗೆ ಚರ್ಚಿಸಲು ಆಕೆಯನ್ನು ಹೋಟೆಲ್ ಕೋಣೆಗೆ ಕರೆದರು, ಆಕೆಯ ಮೇಲೆ ಅತ್ಯಾಚಾರ ಎಸಗಿದರು ಎಂದು ದೂರುದಾರೆ ಹೇಳಿದ್ದಾರೆ.

ಇದನ್ನೂ ಓದಿ; ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲಂಗಾಣ ಸಚಿವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...